ಕರ್ನಾಟಕ

karnataka

By

Published : Sep 23, 2022, 12:28 PM IST

Updated : Sep 23, 2022, 12:39 PM IST

ETV Bharat / state

ಅ.28ಕ್ಕೆ ಗಂಧದ ಗುಡಿ ಸಿನಿಮಾ ರಿಲೀಸ್.. ಹುಬ್ಬಳ್ಳಿಯಲ್ಲಿ ಅಪ್ಪು ಕಟೌಟ್​ಗೆ ಕ್ಷೀರಾಭಿಷೇಕ

ಅ.28ಕ್ಕೆ ಗಂಧದ ಗುಡಿ ಸಿನಿಮಾ ರಿಲೀಸ್ ಆಗಲಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಅಪ್ಪು ಕಟೌಟ್​ಗೆ ಕ್ಷೀರಾಭಿಷೇಕ ಮಾಡಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.

Puneeth fans celebration in Hubli
ಹುಬ್ಬಳ್ಳಿಯಲ್ಲಿ ಅಪ್ಪು ಕಟೌಟ್​ಗೆ ಕ್ಷೀರಾಭಿಷೇಕ

ಹುಬ್ಬಳ್ಳಿ(ಧಾರವಾಡ): ದಿವಗಂತ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಅಮೃತ ಘಳಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಕನ್ನಡ ಚಿತ್ರರಂಗದ ರಾಜರತ್ನ, ಪವರ್ ಸ್ಟಾರ್ ಕಂಡ ಕನಸಿನ ಪಯಣದ ಚಿತ್ರ ಗಂಧದ ಗುಡಿ ಅಕ್ಟೋಬರ್ 28ಕ್ಕೆ ದರ್ಶನ ಕೊಡಲಿದೆ. ಸಿನಿಮಾ ಬಿಡುಗಡೆಗೆ ಇನ್ನೂ ಒಂದು ತಿಂಗಳು ಬಾಕಿ ಇದ್ದು, ಕ್ರೇಜ್ ಹೆಚ್ಚಾಗಿದೆ. ನಗರದ ಚೆನ್ನಮ್ಮ ವೃತ್ತದಲ್ಲಿಂದು ಪುನೀತ್ ರಾಜ್‍ಕುಮಾರ್ ಅವರ ಕಟೌಟ್​ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಪ್ಪು ಕಟೌಟ್​ಗೆ ಕ್ಷೀರಾಭಿಷೇಕ

ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 28, 2022 ರಂದು ಗಂಧದಗುಡಿ ಬಿಡುಗಡೆಯಾದಲಿದೆ. ಅಪ್ಪು ಕೊನೆಯದಾಗಿ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿರುವ ಚಿತ್ರವಿದು. ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ.

ಪುನೀತ್ ರಾಜ್‍ಕುಮಾರ್ ಅಗಲಿ ಅಕ್ಟೋಬರ್ 29ಕ್ಕೆ ಒಂದು ವರ್ಷ ಆಗಲಿದ್ದು, ತೆರೆ ಮೇಲೆ ಅವರ ಭರ್ಜರಿ ದರ್ಶನಕ್ಕೆ ಅಭಿಮಾನಿಗಳು ಒಂದು ತಿಂಗಳು ಮುಂಚೆಯೇ ಸಜ್ಜಾಗಿದ್ದಾರೆ. ನಗರದಲ್ಲಿ ಅಭಿಮಾನಿಗಳು ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಜಯವಾಗಲಿ, ಗಂಧದ ಗುಡಿ ಸಿನಿಮಾಗೆ ಜಯವಾಗಲಿ ಎಂದು ಜಯಘೋಷ ಕೂಗಿ ಅಭಿಮಾನ ವ್ಯಕ್ತಪಡಿಸಿದರು.

ಅ.28ಕ್ಕೆ ಗಂಧದ ಗುಡಿ ಸಿನಿಮಾ ರಿಲೀಸ್

ಇದನ್ನೂ ಓದಿ:ಇಂದು ರಾಷ್ಟ್ರೀಯ ಸಿನಿಮಾ ದಿನ: ಮಲ್ಟಿಪ್ಲೆಕ್ಸ್​ಗಳಲ್ಲಿ ಕೇವಲ ₹75ಕ್ಕೆ ನಿಮ್ಮಿಷ್ಟದ ಸಿನಿಮಾ ನೋಡಿ!​

ಈ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ಒಬ್ಬ ನಿಜವಾದ ನಾಯಕನ ಮತ್ತು ಅವನ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ. ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ತನ್ನ ಜನರಿಗೆ ಪರಿಚಯಿಸುವ ಉತ್ಸಾಹವನ್ನ ದಿ. ಪುನೀತ್ ರಾಜ್ ಕುಮಾರ್ ಮಾಡಿದ್ದಾರೆ.

Last Updated : Sep 23, 2022, 12:39 PM IST

ABOUT THE AUTHOR

...view details