ಕರ್ನಾಟಕ

karnataka

By

Published : Oct 23, 2020, 1:17 PM IST

Updated : Oct 23, 2020, 1:22 PM IST

ETV Bharat / state

ನಟಿ ರಾಗಿಣಿ ಜೊತೆ ನಂಟು: ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಡ್ರಗ್ಸ್ ಜಾಲದಲ್ಲಿ ಸಿಲುಕಿಕೊಂಡಿರುವ ನಟಿ ರಾಗಿಣಿಗೆ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಆಪ್ತ ಎನ್ನಲಾಗ್ತಿದೆ. ರಾಗಿಣಿ ಜೊತೆಗಿನ ನಂಟಿನ ಬಗ್ಗೆ ಗಿರೀಶ್​​ ಅವರನ್ನು ಸಿಸಿಬಿ ವಿಚಾರಣೆ ನಡೆಸಿತ್ತು. ಬಂಧನ ಭೀತಿಯಿಂದ ಜಿಲ್ಲಾ ಸತ್ರ ನ್ಯಾಯಾಲಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

DOC Title * girish-gadigeppagowda-got-conditional-bail-in-link-with-drug-case
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ ಶ್ಯೂರಿಟಿ ನೀಡಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಧಾರವಾಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದ ವಿಚಾರಣೆ ವೇಳೆ ತನಿಖಾಧಿಕಾರಿಗಳಿಗೆ ಸಹಕಾರ ನೀಡಬೇಕು. ತನಿಖೆಯ ವೇಳೆ ತಲೆಮರೆಸಿಕೊಂಡು ಹೋಗಬಾರದು, ಅಧಿಕಾರಿಗಳು ತನಿಖೆಗೆ ಕರೆದಾಗ ಗೈರಾಗಬಾರದು. ತನಿಖೆಗೆ ಬೇಕಾದ ಅವಶ್ಯಕ ದಾಖಲೆಗಳನ್ನು ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಲಾಗಿದೆ.

ರಾಗಿಣಿ ಜೊತೆ ಇದೆ ಎನ್ನಲಾದ ನಂಟಿನ ಬಗ್ಗೆ ಗಿರೀಶ್​ ಅವರನ್ನು ಸಿಸಿಬಿ ವಿಚಾರಣೆ ನಡೆಸಿತ್ತು. ಮೂರು ದಿನಗಳ ಕಾಲ ವಿಚಾರಣೆ ನಡೆಸಿದ್ದ ಸಿಸಿಬಿ ಟೀಂ ಅವರ ಬಳಿ ಮಾಹಿತಿ ಸಂಗ್ರಹಿಸಿತ್ತು.

ಗಿರೀಶ್ ತಮ್ಮ ಮೇಲೆ ಯಾವುದೇ ದೂರು ದಾಖಲಾಗದೇ ಇದ್ದರೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಬಂಧನ ಭೀತಿಯಿಂದ ಸೆ.18ರಂದು ಧಾರವಾಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

Last Updated : Oct 23, 2020, 1:22 PM IST

ABOUT THE AUTHOR

...view details