ಹುಬ್ಬಳ್ಳಿ:ಎಲ್ಲರನ್ನೂ ಒಮ್ಮತಕ್ಕೆ ತೆಗೆದುಕೊಂಡು ಸರ್ಕಾರ ನಡೆಸಬೇಕು. ಆದರೆ ಎನ್ಆರ್ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಎನ್ಆರ್ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ: ಬಸವರಾಜ ಹೊರಟ್ಟಿ
ಬಿಜೆಪಿಯವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಆದರೆ ಎನ್ಆರ್ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಇಲ್ಲವಾದ್ರೆ ದೇಶದಲ್ಲಿ ಅರಾಜಕತೆ ಉಂಟಾಗುವುದು. ಮಹದಾಯಿ ವಿಚಾರದಲ್ಲಿ ಮಹದಾಯಿ ಅಚ್ಚುಕಟ್ಟಿನ ಪ್ರದೇಶದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಟೀಕೆ ಮಾಡುವವರಿಗೆ ಯಾವುದೇ ರೀತಿ ಉತ್ತರ ಕೊಡುವುದಿಲ್ಲ ಎಂದರು.