ಕರ್ನಾಟಕ

karnataka

ನಾಳೆಯಿಂದ ಧಾರವಾಡದಲ್ಲಿ ಕಠಿಣ ಲಾಕ್​ಡೌನ್​ ಜಾರಿ : ಡಿಸಿ ನಿತೇಶ್​ ಪಾಟೀಲ್​

By

Published : May 23, 2021, 9:58 PM IST

ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಅನಗತ್ಯ ಓಡಾಟ, ವಾಯುವಿಹಾರ, ಕಾರಣವಿಲ್ಲದೆ ಹೊರಗೆ ಸಂಚರಿಸಿ ನಿಯಮ ಉಲ್ಲಂಘಿಸಿದರೆ ಅಂತಹ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ..

ಡಿಸಿ ನಿತೇಶ್​ ಪಾಟೀಲ್​
ಡಿಸಿ ನಿತೇಶ್​ ಪಾಟೀಲ್​

ಧಾರವಾಡ :ಸರ್ಕಾರದ ಆದೇಶದಂತೆ ನಾಳೆ ಮೇ 24ರ ಬೆಳಗ್ಗೆ 6 ರಿಂದ ಜೂನ್ 7ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲೆಯಲ್ಲಿಯೂ ಲಾಕ್‌ಡೌನ್ ವಿಸ್ತರಿಸಲಾಗಿದೆ.

‘ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಿರ್ಣಯದಂತೆ ಇನ್ನಷ್ಟು ಕಠಿಣ ನಿಯಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಹೇಳಿದ್ದಾರೆ.

ನಗರ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ,ಮಾಧ್ಯಮ ಪ್ರತಿನಿಧಿಗಳ ಜೊತೆಗೆ ವರ್ಚುವಲ್ ಮೂಲಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.

ಧಾರವಾಡ ಜಿಲ್ಲಾಡಳಿತ ಮೇ 22 ಮತ್ತು 23ರಂದು ಜಾರಿ ಮಾಡಿದ್ದ ಲಾಕ್‌ಡೌನ್​ಗೆ ಸಾರ್ವಜನಿಕರು ಉತ್ತಮ ಸ್ಪಂದನೆ ನೀಡಿದ್ದಾರೆ. ನಾಳೆಯಿಂದ ಸಹ ಲಾಕ್​ಡೌನ್​ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಕಠಿಣ ಕ್ರಮಕೈಗೊಳ್ಳಲಾಗುವುದು.

ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಅನಗತ್ಯ ಓಡಾಟ, ವಾಯುವಿಹಾರ, ಕಾರಣವಿಲ್ಲದೆ ಹೊರಗೆ ಸಂಚರಿಸಿ ನಿಯಮ ಉಲ್ಲಂಘಿಸಿದರೆ ಅಂತಹ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಓದಿ:ಲಾಕ್​ಡೌನ್​ ಎಫೆಕ್ಟ್ ​: ನಡೆದುಕೊಂಡು ಮನೆ ಸೇರಿದ ನವ ದಂಪತಿ

ABOUT THE AUTHOR

...view details