ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ ಹಳ್ಳದ ಪ್ರವಾಹಕ್ಕೆ ರೈತ ಕೊಚ್ಚಿ ಹೋದ ಶಂಕೆ - ಪ್ರವಾಹ

ಧಾರವಾಡದಲ್ಲಿ ರೈತನೋರ್ವ ನಾಪತ್ತೆಯಾಗಿ ಮೂರು ದಿನ ಕಳೆದರೂ ಯಾವುದೇ ಅಧಿಕಾರಿ ಸ್ಪಂದಿಸಿಲ್ಲ ಎಂದು ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಹಳ್ಳದ ಪ್ರವಾಹಕ್ಕೆ ರೈತ ಕೊಚ್ಚಿ ಹೋದ ಶಂಕೆ: ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

By

Published : Aug 10, 2019, 9:20 PM IST

ಧಾರವಾಡ:ಭಾರೀ ಮಳೆಗೆ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದ್ದು, ರೈತನೊಬ್ಬ ಹಳ್ಳದ ಪ್ರವಾಹಕ್ಕೆ ಕೊಚ್ಚಿ‌ಹೋಗಿರುವ ಶಂಕೆ ವ್ಯಕ್ತವಾಗಿದೆ.

ಹಳ್ಳದ ಪ್ರವಾಹಕ್ಕೆ ರೈತ ಕೊಚ್ಚಿಹೋದ ಶಂಕೆ: ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

ಧಾರವಾಡ ತಾಲೂಕಿನ ಕಲ್ಲಾಪುರದ ಬಸಪ್ಪ ಪಾಟೀಲ್​​ (54) ನಾಪತ್ತೆಯಾಗಿರುವ ರೈತ. ಹೊಲದಿಂದ ವಾಪಸ್​ ಬರುವ ಸಂದರ್ಭದಲ್ಲಿ ಪ್ರವಾಹಕ್ಕೀಡಾಗಿರುವ ಕಲ್ಲಾಪುರ-ವೀರಾಪುರ ಮಧ್ಯದ ಹಳ್ಳದಲ್ಲಿ ನಾಪತ್ತೆಯಾಗಿದ್ದಾನೆಂದು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ಇನ್ನು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ರೈತನ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಭೇಟಿ ನೀಡಿ ಸಾಂತ್ವನ ಹೇಳಿದರು.

ABOUT THE AUTHOR

...view details