ಹುಬ್ಬಳ್ಳಿ:ಹೆಸ್ಕಾಂನಲ್ಲಿ ನೂರಾರು ಕೋಟಿ ರೂಪಾಯಿ ಗುತ್ತಿಗೆ ಕಾಮಗಾರಿಯಲ್ಲಿ 25% ಕಮೀಷನ್ ದಂಧೆ ನಡೆದಿದೆ. ವಿವಿಧ ಕಾಮಗಾರಿಗಳಿಗೆ 472 ಕೋಟಿ ರೂಪಾಯಿ ಟೆಂಡರ್ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ರುದ್ರೇಶ್ ಆರೋಪಿಸಿದ್ದರು. ಇದೀಗ ಟೆಂಡರ್ ರದ್ದುಗೊಳಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.
ರೈತರ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಹೆಚ್ಟಿ ಲೈನ್ ಮತ್ತು ಎಲ್ಟಿ ಲೈನ್ ನಿರ್ಮಿಸುವುದು ಹಾಗೂ ಲಿಂಕ್ಲೈನ್ ಕಾಮಗಾರಿಗೆ 34 ಲಾಟ್ಗಳಲ್ಲಿ ಟೆಂಡರ್ ನೀಡಲಾಗಿತ್ತು. ಆದರೆ ಲಂಚ ನೀಡುವವರಿಗೆ ಅನುಕೂಲ ಮಾಡಲು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಟೆಂಡರ್ ರೂಪಿಸಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಹೆಸ್ಕಾಂ ಎಂಡಿ ಡಿ.ಭಾರತಿ ಮತ್ತು ತಾಂತ್ರಿಕ ನಿರ್ದೇಶಕ ಶ್ರೀಕಾಂತ ಸಸಾಲೊಟ್ಟಿ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದರು.