ಕರ್ನಾಟಕ

karnataka

ETV Bharat / state

ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ : ಯೂ ಟರ್ನ್ ಹೊಡೆದರಾ ಗೃಹ ಸಚಿವರು? - ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಹೇಳಿಕೆ

ನಿನ್ನೆ ಬೆಳಗಾವಿಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಮಾನಸಿಕ ಅಸ್ವಸ್ಥ ಎಂದಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ಯೂ ಟರ್ನ್ ಹೊಡೆದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಾತು ಬದಲಿಸಿದ್ದಾರೆ.

Home minister Basavraj Bommai Statement in Hubballi
ಯೂ ಟರ್ನ್ ಹೊಡೆದ್ರಾ ಗೃಹ ಸಚಿವರು?

By

Published : Jan 22, 2020, 8:48 PM IST

ಹುಬ್ಬಳ್ಳಿ :ನಿನ್ನೆ ಬೆಳಗಾವಿಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಮಾನಸಿಕ ಅಸ್ವಸ್ಥ ಎಂದಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ಯೂ ಟರ್ನ್ ಹೊಡೆದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಾತು ಬದಲಿಸಿದ್ದಾರೆ.

ಯೂ ಟರ್ನ್ ಹೊಡೆದ್ರಾ ಗೃಹ ಸಚಿವರು?
ನಗರದಲ್ಲಿಂದು ಮಾತನಾಡಿದ ಅವರು, ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ. ಬಾಂಬ್ ಇಟ್ಟ ಯುವಕನ ಹಿನ್ನೆಲೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಂಬ್ ಸಿಕ್ಕ ತಕ್ಷಣ ಸಿಸಿಟಿವಿ ದೃಶ್ಯ ಕಲೆ ಹಾಕಿ ಮೂರು ತಂಡಗಳನ್ನ ರಚನೆ ಮಾಡಲಾಗಿತ್ತು. ಅವನ ಮನೆಯವರು ಹಲವಾರು ವಿಚಾರಗಳನ್ನ ಆತನ ಬಗ್ಗೆ ಹೇಳಿದ್ದಾರೆ. ಆದರೆ ಯಾವುದೂ ಕೂಡ ಅಂತಿಮವಲ್ಲ. ಅವನು ಮಾನಸಿಕ ಅಸ್ವಸ್ಥ ಎಂದು ಎಲ್ಲಿಯೂ ನಾನು ಹೇಳಿಲ್ಲ. ತನಿಖೆ ಆಗದ ಹೊರತು ನಿಖರವಾಗಿ ಏನೂ ಹೇಳುವುದಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರು ಎಫ್‌ಎಸ್‌ಎಲ್ ತಜ್ಞರಂತೆ ಮಾತನಾಡುತ್ತಿದ್ದಾರೆ. ಅವರು ಸರ್ಟಿಫಿಕೇಟ್ ಕೊಡಲಿಕ್ಕೆ ಬರುತ್ತಾ? ತನಿಖೆಯಿಂದ ಎಲ್ಲವೂ ಹೊರಬರಬೇಕು. ತನಿಖೆ ನಡೆಯುತ್ತಿದೆ. ಬಂಧನವಾದ ಆರೋಪಿಯ ಸಮಗ್ರವಾದ ತನಿಖೆ ಮುಗಿದ ಮೇಲೆ ಕೃತ್ಯದ ಹಿಂದೆ ಯಾರಿದ್ದಾರೆಂದು ತಿಳಿಯುತ್ತದೆ. ಕುಮಾರಸ್ವಾಮಿಯವರು ಅಲ್ಪಸಂಖ್ಯಾತ ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಜೊತೆ ಪೈಪೋಟಿ ಮಾಡ್ತಾ ಇದ್ದಾರೆ. ಹೀಗಾಗಿ ಅವರು ತೀವ್ರ ಗತಿಯಲ್ಲಿ‌ ರಿಯಾಕ್ಟ್ ಮಾಡ್ತಾ ಇದ್ದಾರೆ. ಅವರು ಪೊಲೀಸರ ಬಗ್ಗೆ ಮಾತನಾಡುತ್ತಾರೆ. ನಾವು ಅಲ್ಲಿ ಪೋಲಿಸರನ್ನ ನೇಮಕ ಮಾಡಿಲ್ಲ. ಎಲ್ಲರೂ ಕುಮಾರಸ್ವಾಮಿ ಸಿಎಂ ಇದ್ದ ಅವಧಿಯಲ್ಲಿ ನೇಮಕರಾದವರು ಎಂದರು.

ರಾಜ್ಯದಲ್ಲಿ ಉಗ್ರ ನಿಗ್ರಹ ಪಡೆಯನ್ನು ಇನ್ನಷ್ಟು ಬಲಪಡಿಸುತ್ತಿದ್ದೇವೆ. ಅದರ ಬಗ್ಗೆ ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.

ABOUT THE AUTHOR

...view details