ಕಲಘಟಗಿ: ಗ್ರಾಮದ ಅಭಿವೃದ್ಧಿಯ ವಿಷಯದಲ್ಲಿ ಎಲ್ಲ ನೂತನ ಸದಸ್ಯರು ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು ಒಗ್ಗಟ್ಟಾಗಿ ಶ್ರಮ ವಹಿಸಿ ತಮ್ಮ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ತಿಳಿಸಿದರು.
ಪಟ್ಟಣದ ಹನ್ನೆರಡು ಮಠದ ಆವರಣದಲ್ಲಿ ತಾಲೂಕು ಬಿಜೆಪಿ ಪಕ್ಷದಿಂದ ಆಯೋಜಿಸಲಾಗಿದ್ದ ನೂತನ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಲಿಂಬಿಕಾಯಿ ಭಾಗವಹಿಸಿ ಮಾತನಾಡಿದರು. ಗ್ರಾಮದ ಅಭಿವೃದ್ಧಿಯೆಡೆಗೆ ಗಮನ ಹರಿಸಿ ಎಂದರು.