ಕರ್ನಾಟಕ

karnataka

ಅನಗತ್ಯ ಓಡಾಟಕ್ಕೆ ಬ್ರೇಕ್: ವಾಹನಗಳನ್ನು ಜಪ್ತಿ ಮಾಡಿದ ಹು-ಧಾ ಪೊಲೀಸ್ ಆಯುಕ್ತ

By

Published : May 10, 2021, 12:48 PM IST

ಕೊರೊನಾ ತಡೆಗಟ್ಟಲು ಪೊಲೀಸ್ ಇಲಾಖೆ‌ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೂ ಸಾರ್ವಜನಿಕರು ವಿನಾಕಾರಣ ವಾಹನಗಳಲ್ಲಿ ಸಂಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಫೀಲ್ಡಿಗಿಳಿದು ವಾಹನ ತಪಾಸಣೆಗೆ ಮುಂದಾದ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಡಿಸಿಪಿ ಕೆ.ರಾಮರಾಜನ್ ಅನಗತ್ಯವಾಗಿ ಬೀದಿಗಿಳಿದವರ ವಾಹನಗಳನ್ನು ಸೀಜ್ ಮಾಡಿದ್ದಾರೆ.

Hubli
ವಾಹನಗಳನ್ನು ಸೀಜ್ ಮಾಡಿದ ಹುಬ್ಬಳ್ಳಿ ಪೋಲಿಸ್ ಆಯುಕ್ತ

ಹುಬ್ಬಳ್ಳಿ: ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ಲಾಕ್​ಡೌನ್ ಘೋಷಣೆ ಮಾಡಿದರೂ ಸಹ ಸಾರ್ವಜನಿಕರು ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸ್ ಕಮೀಷನರ್ ಲಾಬೂರಾಮ್ ಅವರು ಸ್ವತಃ ಫೀಲ್ಡ್​ಗಿಳಿದಿದ್ದಾರೆ. ಈ ವೇಳೆ ಬೈಕ್ ಹಾಗೂ ಕಾರುಗಳನ್ನು ಸೀಜ್​ ಮಾಡಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ವಾಹನಗಳನ್ನು ಸೀಜ್ ಮಾಡಿದ ಹುಬ್ಬಳ್ಳಿ ಪೊಲೀಸ್ ಆಯುಕ್ತ

ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ‌ ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರ ಆರೋಗ್ಯ ಕಾಪಾಡಲು ಲಾಕ್​ಡೌನ್ ಜಾರಿ ಮಾಡಿ ಯಾರೂ ಹೊರಬರದಂತೆ ಮನವಿ ಮಾಡಲಾಗಿದೆ. ಆದರೂ ಜನರು ವಿನಾಕಾರಣ ವಾಹನಗಳನ್ನು ರೋಡಿಗಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಫೀಲ್ಡಿಗಿಳಿದು ವಾಹನ ತಪಾಸಣೆಗೆ ಮುಂದಾದ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಡಿಸಿಪಿ ಕೆ.ರಾಮರಾಜನ್ ಅವರು ಅನಗತ್ಯವಾಗಿ ಓಡಾಡುತ್ತಿದ್ದ ಸವಾರರ ವಾಹನಗಳನ್ನು ಸೀಜ್​ ಮಾಡಿ ಎಚ್ಚರಿಕೆ ನೀಡಿದರು.

ABOUT THE AUTHOR

...view details