ಧಾರವಾಡ : ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿವೋರ್ವ ತನ್ನ ಪತ್ನಿಯ ಮೂಗು ಕಚ್ಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಉಮೇಶ್ ಎಂಬಾತ ತನ್ನ ಹೆಂಡತಿ ಗೀತಾ ಮೇಲೆ ಹಲ್ಲೆ ಮಾಡಿದ್ದಾನೆ. ದಂಪತಿ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು. ಹಾಗಾಗಿ, ಗೀತಾ ತವರು ಮನೆ ಸೇರಿದ್ದಳು. ಅಲ್ಲಿಗೆ ಹೋದ ಉಮೇಶ್, ಕುಡಿದ ಮತ್ತಿನಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡಿ ಆಕೆಯ ಮೂಗನ್ನು ಕಚ್ಚಿದ್ದಾನೆ.