ಕರ್ನಾಟಕ

karnataka

ETV Bharat / state

ಅನರ್ಹರ ಪರ ಸಿಎಂ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ: ಬಸವರಾಜ ಹೊರಟ್ಟಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​ವೈ  ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದರು.

By

Published : Nov 2, 2019, 1:05 PM IST

ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರ್ಕಾರ ಬಂದಿದೆ ಎಂಬ ಸಿಎಂ ಬಿಎಸ್​ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಅನರ್ಹರ ಪರ ಹೇಳಿಕೆಗೆ ನನ್ನ ಸಹಮತವಿದೆ ಎಂದರು.

ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​ವೈ ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೆಚ್​ಡಿಕೆ ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾನಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಇರುವಂತಾಗುತ್ತದೆ. ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ABOUT THE AUTHOR

...view details