ಧಾರವಾಡ: ಬಿಜೆಪಿ ನಾಯಕರು ಎಲ್ಲರ ಅಭಿಪ್ರಾಯ ಪಡೆದು, ಕೇಂದ್ರಕ್ಕೆ ಆ ಅಭಿಪ್ರಾಯ ಕಳುಹಿಸಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಅವರ ತಂದೆ ಚಂದ್ರಕಾಂತ ಬೆಲ್ಲದ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ನನಗೆ ಬಹಳ ಗೌರವ ಇದೆ. ಇವತ್ತು ಅವರು ಮಾಡುತ್ತಿರುವ ಕೆಲಸ ಎಲ್ಲ ರಾಜ್ಯದ ಜನರು ಮೆಚ್ಚಿದ್ದಾರೆ. ಅರವಿಂದ ಬೆಲ್ಲದ ಸಿಎಂ ಆಗುತ್ತಿದ್ದಾರೆ ಎಂದು ನಾನೂ ಟಿವಿಯಲ್ಲಿ ನೋಡುತ್ತಿದ್ದೇನೆ. ನಾನು ಯಾರ ಜೊತೆಯಲ್ಲಿಯೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.