ಹುಬ್ಬಳ್ಳಿ:ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬರುವ ತನಕ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ಸ್ಫೋಟ ಕುರಿತು ಎಫ್ಎಸ್ಎಲ್ ವರದಿ ಬಂದ ಬಳಿಕ ಮಾಹಿತಿ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಘಟಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದ ಬಳಿಕ ಮಾಹಿತಿ ನೀಡುತ್ತೇನೆ. ತನಿಖೆಗೆ ತೊಂದರೆ ಉಂಟಾಗುವುದರಿಂದ ಈಗ ಯಾವುದೇ ಮಾಹಿತಿ ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರೈಲ್ವೆ ನಿಲ್ದಾಣದಲ್ಲಿನ ಸ್ಫೋಟ ಕುರಿತು ತನಿಖೆಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಈಗ ಯಾವುದೇ ಮಾಹಿತಿ ನೀಡಲಾಗುವುದಿಲ್ಲ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮತ್ತು ಮಹಾರಾಷ್ಟ್ರ ಪೊಲೀಸರ ಸಹಾಯ ಪಡೆಯಲಾಗುತ್ತಿದೆ. ಸ್ಫೋಟಕ ವಸ್ತುಗಳು ಎಲ್ಲಿಂದ ಬಂದವು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.