ಕರ್ನಾಟಕ

karnataka

ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದು ಸರಿಯಲ್ಲ: ಜಗದೀಶ್ ಶೆಟ್ಟರ್

By

Published : Oct 13, 2022, 5:14 PM IST

ದೇಶದ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಜಗದೀಶ್​ ಶೆಟ್ಟರ್​ ಹೇಳಿದರು.

Kn_hbl_0
ಜಗದೀಶ್​​ ಶೆಟ್ಟರ್​

ಹುಬ್ಬಳ್ಳಿ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಐದು ವರ್ಷ ಮುಖ್ಯ ಮಂತ್ರಿಯಾದವರು ಹಾಗೂ ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರಿಗೆ ಹೇಗಿರಬೇಕು ಎಂದು ಹೇಳುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಜಗದೀಶ್​​ ಶೆಟ್ಟರ್​ ಪ್ರತಿಕ್ರಿಯೆ

ನಗರದಲ್ಲಿಂದು ಮಾತನಾಡಿದ ಅವರು, ಜವಾಬ್ದಾರಿ ಸ್ಥಾನ ನಿಭಾಯಿಸಿದ ಸಿದ್ದರಾಮಯ್ಯ ಈ ರೀತಿ ಮಾತನಾಡುವುದ ಸರಿಯಲ್ಲ.
ಪ್ರಧಾನಿ‌ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವಂತಹದಲ್ಲ. ಅವರಿಗೆ ಅಪಮಾನ ಮಾಡುವುದು ದೇಶದ ಜನರಿಗೆ ಅಪಮಾನ ಮಾಡಿದ ಹಾಗೆ ಎಂದು ಹೇಳಿದರು.

ಆರ್​ಎಸ್​ಎಸ್ ಕಾರ್ಯಕರ್ತರ ಮೇಲೆ ಹಲ್ಲೆ:ಕೆಲವು ಕಡೆ ಆರ್​ಎಸ್​ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಇದರಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಸೂಕ್ತವಾಗಿ ನಿಭಾಯಿಸುತ್ತದೆ ಎಂದರು.

ಇದನ್ನೂ ಓದಿ:ಹಿಜಾಬ್ ವಿವಾದ ಪ್ರಕರಣ.. ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ?

ABOUT THE AUTHOR

...view details