ಹುಬ್ಬಳ್ಳಿ:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಮನಗರಕ್ಕೆ ಮಾತ್ರ ಶೀಮಿತ ಎನ್ನುವಂತೆ ಮಾತನಾಡುವುದು ತಪ್ಪು ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಲ್ಲಿ ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡಬಾರದು ಎಂದರು.
ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಕೇವಲ ರಾಮನಗರಕ್ಕೆ ಸೀಮಿತ ಎನ್ನುವಂತೆ ಮಾತನಾಡಿದ್ದಾರೆ. ಅಲ್ಲಿಗೆ ಶಿಫ್ಟ್ ಮಾಡಿದ್ದು ಪೊಲೀಸ್ ಇಲಾಖೆಯ ನಿರ್ಧಾರವಾಗಿದೆ. ಅಲ್ಲದೆ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶವೇ ಹೋರಾಟ ನಡೆಸುತ್ತಿದೆ. ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ಕುಮಾರಸ್ವಾಮಿಯವರು ಮಾತನಾಡುವುದು ಸರಿಯಲ್ಲ ಎಂದರು.