ಕರ್ನಾಟಕ

karnataka

ETV Bharat / state

ಚೆನ್ನಾಗಿದೆಯೋ ಸಾಂಬಾರ್‌.. ಧಾರವಾಡ ಕೇಂದ್ರ ಕಾರಾಗೃಹದ ಅಡುಗೆ ಸಿಬ್ಬಂದಿ ಬಗ್ಗೆ ನ್ಯಾ.ಬಿ.ವೀರಪ್ಪ ಮೆಚ್ಚುಗೆ.. - Judge B Veerappa visits Dharwad Central Prison

ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶುಕ್ರವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ಬಿ.ವೀರಪ್ಪ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದರು. ಕೈದಿಗಳ ಊಟ, ಆರೋಗ್ಯ, ಅರಿವು, ಪರಿವರ್ತನೆ ಮತ್ತು ಕಾನೂನು ನೆರವು ಕುರಿತು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು..

Eat Food prepared for prisoners
ಧಾರವಾಡ ಕೇಂದ್ರ ಕಾರಾಗೃಹಕ್ಕೆ ನ್ಯಾ.ಬಿ.ವೀರಪ್ಪ ಭೇಟಿ

By

Published : May 20, 2022, 7:15 PM IST

ಧಾರವಾಡ :ಇಲ್ಲಿನ ಕೇಂದ್ರ ಕಾರಾಗೃಹವು ಪ್ರತಿಯೊಂದು ಕೆಲಸವನ್ನು ಒಳ್ಳೆ ರೀತಿಯಿಂದ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ ಎಲ್ಲಾ ಕಾರಾಗೃಹಗಳಿಗಿಂತ ಧಾರವಾಡ ಕೇಂದ್ರ ಕಾರಾಗೃಹ ಉತ್ತಮ ಕಾರ್ಯಕ್ಷಮತೆ ಹೊಂದಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ಬಿ.ವೀರಪ್ಪ ಅವರು ಹೇಳಿದರು.

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಕೈದಿಗಳ ಊಟ, ಆರೋಗ್ಯ, ಅರಿವು, ಪರಿವರ್ತನೆ ಮತ್ತು ಕಾನೂನು ನೆರವು ಕುರಿತು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಕಾರಾಗೃಹದಲ್ಲಿನ ಆಹಾರ ದಾಸ್ತಾನು ಕೊಠಡಿ, ಟೆಲಿಫೋನ್ ಬೂತ್, ಗ್ರಂಥಾಲಯ, ಅಡುಗೆ ಮನೆ, ದನದ ಕೊಟ್ಟಿಗೆ, ಹೈನುಗಾರಿಕೆ ವಿಭಾಗಗಳನ್ನು ವೀಕ್ಷಿಸಿ, ಪರಿಶೀಲಿಸಿದರು.

ಧಾರವಾಡ ಕೇಂದ್ರ ಕಾರಾಗೃಹಕ್ಕೆ ನ್ಯಾ.ಬಿ.ವೀರಪ್ಪ ಭೇಟಿ ನೀಡಿರುವುದು..

ಅಡುಗೆಮನೆಗೆ ಭೇಟಿ ನೀಡಿದ ನ್ಯಾಯಮೂರ್ತಿಗಳು ಸ್ವತಃ ಅನ್ನ-ಸಾರು, ಚಪಾತಿ ಸವಿಯುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿದರು. ಜೈಲಿನಲ್ಲಿರುವ ಪುರುಷ ಹಾಗೂ ಮಹಿಳಾ ಕೈದಿಗಳ ವಾರ್ಡ್​ಗಳಿಗೆ ಭೇಟಿ ನೀಡಿ, ಅವರ ಕುಂದುಕೊರತೆಗಳನ್ನು ಆಲಿಸಿದರು. ಅಗತ್ಯವಿರುವ ಕೈದಿಗಳಿಗೆ ಉಚಿತವಾಗಿ ನ್ಯಾಯವಾದಿಗಳನ್ನು ನೀಡಿ, ಅವರ ಪರವಾಗಿ ಪ್ರಕರಣಗಳನ್ನು ನಡೆಸಲು ಪ್ರಾಧಿಕಾರದಿಂದ ಸಹಾಯ ಮಾಡುವುದಾಗಿ ನ್ಯಾಯಮೂರ್ತಿಗಳು ಭರವಸೆ ನೀಡಿದರು.

ಕೇಂದ್ರ ಕಾರಾಗೃಹದಲ್ಲಿನ ಗಾಂಧಿಭವನದಲ್ಲಿ ವಿಚಾರಾಧೀನ ಮತ್ತು ಶಿಕ್ಷೆಗೆ ಒಳಪಟ್ಟ ಕೈದಿಗಳನ್ನು ಮಾತನಾಡಿಸಿದರು. ಪ್ರತಿಯೊಬ್ಬರಿಗೂ ಯೋಗ, ಧ್ಯಾನ ಮುಖ್ಯ. ಕಾರಾಗೃಹದ ಸುತ್ತ ಒಳ್ಳೆಯ ವಾತಾವರಣವಿದೆ. ಗ್ರಂಥಾಲಯವಿದೆ. ಓದಿ ವಿದ್ಯಾವಂತರಾಗಿ ಜ್ಞಾನದ ಜೊತೆ ಒಳ್ಳೆಯ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಬೇಕು. ಉಚಿತ ನ್ಯಾಯ ದೊರಕಿಸಿಕೊಡುವಲ್ಲಿ ಪ್ರಯತ್ನಿಸುತ್ತೇವೆ ಎಂದು ಹೇಳಿದ ಅವರು, ಧಾರವಾಡ ಕಾರಾಗೃಹದ ಉತ್ತಮ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸ್ವತಃ ಮಾಜಿ ಸಿಎಂ ಬೇಡವೆಂದ್ರೂ ಸಿದ್ದರಾಮಯ್ಯ ಶೂ ಹಾಕಿದ ಕಾರ್ಯಕರ್ತ..

ಕಾರಾಗೃಹದಲ್ಲಿ ಹೊಸದಾಗಿ ರೂಪಿಸಿದ ಎಫ್‌ಎಂ ಕೇಂದ್ರ ಮಾದರಿಯ ಮನರಂಜನೆ ಹಾಗೂ ಮಾನಸಿಕ ಪರಿವರ್ತನೆ ಕಾರ್ಯಕ್ರಮ ಬಿತ್ತರಿಸುವ ರೇಡಿಯೋ ವ್ಯವಸ್ಥೆಯನ್ನು ನ್ಯಾಯಮೂರ್ತಿಗಳು ಉದ್ಘಾಟಿಸಿದರು. ಆಪ್ತ ಸಮಾಲೋಚನೆ ಹಾಗೂ ಉಚಿತ ಕಾನೂನು ನೆರವು ಘಟಕಕ್ಕೆ ಭೇಟಿ ನೀಡಿದರು.

ABOUT THE AUTHOR

...view details