ಕರ್ನಾಟಕ

karnataka

ETV Bharat / state

ಹು-ಧಾ ರಸ್ತೆ ಸಮಸ್ಯೆ ಬಗೆಹರಿಸುವಂತೆ ಮನವಿ - Smart city project

ಚರಂಡಿ ಹಾಗೂ ರಸ್ತೆ ಸಮಸ್ಯೆಗಳಿಂದ ಹು-ಧಾ ಜನರು ಸಂಕಷ್ಟ ಅನುಭವಿಸುವಂತಾಗಿದ್ದು, ಹತ್ತು ದಿನಗಳ ಒಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಿವಸೇನಾ ಮನವಿ ಪತ್ರ ಸಲ್ಲಿಸಿದೆ.

Shiva sena
Shiva sena

By

Published : Sep 18, 2020, 1:04 PM IST

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಗುಂಡಿ ಬಿದ್ದಿದ್ದು ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಶಿವಸೇನಾ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದರು ಕೂಡ ಹು-ಧಾ ಮಹಾನಗರ ಮಾತ್ರ ಯಾವುದೇ ಕಾರಣಕ್ಕೂ ಸಮಸ್ಯೆಗಳಿಂದ ಮುಕ್ತವಾಗುತ್ತಿಲ್ಲ. ಅಲ್ಲದೇ ಸುಮಾರು ವರ್ಷಗಳಿಂದ ಚರಂಡಿ ಹಾಗೂ ರಸ್ತೆ ಸಮಸ್ಯೆಗಳಿಂದ ಜನರು ಸಂಕಷ್ಟ ಅನುಭವಿಸುವಂತಾಗಿದ್ದು, ಹತ್ತು ದಿನಗಳ ಒಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಇಲ್ಲವಾದರೆ ಪಾಲಿಕೆಗೆ ಮುತ್ತಿಗೆ ಹಾಕಲಾಗವುದು ಎಂದು ಶಿವಸೇನಾ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ABOUT THE AUTHOR

...view details