ಕರ್ನಾಟಕ

karnataka

ಧಾರವಾಡದಲ್ಲಿ ರಸ್ತೆ ಪಕ್ಕೆಕ್ಕೆ ಉರುಳಿದ ಬಸ್: ತಪ್ಪಿದ ಅಪಾಯ

By

Published : Oct 11, 2019, 7:57 AM IST

ಧಾರವಾಡದಿಂದ ಕ್ಯಾರಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ​ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

KSRTC Bus fell down on road

ಧಾರವಾಡ :ರಸ್ತೆ ಪಕ್ಕಕ್ಕೆ ಕೆಎಸ್ಆರ್​ಟಿಸಿ ಬಸ್ ಉರುಳಿ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಧಾರವಾಡದ ಕ್ಯಾರಕೊಪ್ಪ ರಸ್ತೆ ಬಳಿ ಸಂಭವಿಸಿದೆ.

ಧಾರವಾಡದಿಂದ ಕ್ಯಾರಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಇದಾಗಿದ್ದು, ಸುಮಾರು 25 ರಿಂದ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಚಲಿಸುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ABOUT THE AUTHOR

...view details