ಕರ್ನಾಟಕ

karnataka

ETV Bharat / state

ಕುಂದಗೋಳ ಉಪ ಚುನಾವಣೆ... ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿಯಿಂದ ಪ್ರತಿತಂತ್ರ

ಕುಂದಗೋಳ ಕ್ಷೇತ್ರವನ್ನು ಗೆಲ್ಲಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ರಣತಂತ್ರ ರೂಪಿಸಿದೆ. ಬಿಜೆಪಿ ಸಹ ಉಪ ಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್​ ಪ್ರತಿಯಾಗಿ ತಂತ್ರ ಹೆಣೆಯುವ ಬಗ್ಗೆ ಬಿಜೆಪಿ ನಾಯಕರು ಚರ್ಚೆಯಲ್ಲಿ ತೊಡಗಿದ್ದಾರೆ.

By

Published : May 5, 2019, 12:32 PM IST

ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ ಸಭೆ

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.‌ ಕಾಂಗ್ರೆಸ್ ಪಕ್ಷ ಕುಂದಗೋಳ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಬೇಕು ಎಂದು ರಣತಂತ್ರ ರೂಪಿಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪ್ರತಿತಂತ್ರ ರೂಪಿಸಿದೆ.

ಇಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ ಸಭೆ

ಸಭೆಯಲ್ಲಿ ಬಿಎಸ್​ವೈ, ಶ್ರೀರಾಮುಲು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಎಸ್ ಐ ಚಿಕ್ಕನಗೌಡರ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಭಾಗಿಯಾಗಿದ್ದಾರೆ.

ಕುಂದಗೋಳ ಉಪ ಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿರುವ ನಾಯಕರು ಮೈತ್ರಿ ನಾಯಕರು ಚುನಾವಣೆಯಲ್ಲಿ ಅನುಸರಿಸುತ್ತಿರುವ ರಣನೀತಿಗಳಿಗೆ ಪ್ರತಿತಂತ್ರ ಹೆಣೆಯುತ್ತಿದ್ದಾರೆ.

ABOUT THE AUTHOR

...view details