ಹುಬ್ಬಳ್ಳಿ :ನಗರದ ಕೊಯಿನ್ ರಸ್ತೆಯಲ್ಲಿಸ್ಮಾರ್ಟ್ ಸಿಟಿ ಯೋಜನೆಯ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೊಯಿನ್ ರಸ್ತೆ ನಿರ್ಮಾಣವಾಗುತ್ತಿದ್ದು, ಇದರ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದಿದ್ದು, ಮಣ್ಣಿನಡಿ ಸಿಲುಕಿದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ಮೇಲೆತ್ತಿದ ಸ್ಥಳೀಯರು ಓದಿ : ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ
ಘಟನಾ ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹರಸಾಹಸ ಪಟ್ಟು ಕಾರ್ಮಿಕನನ್ನು ಮಣ್ಣಿನಡಿಯಿಂದ ಹೊರಕ್ಕೆ ತಂದಿದ್ದಾರೆ. ಗಂಟೆಗೂ ಹೆಚ್ಚು ಕಾಲ ಮಣ್ಣಿನಡಿ ಸಿಲುಕಿದ ಪರಿಣಾಮ ಆತನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದಾರೆ.