ಧಾರವಾಡ:ಮಹದಾಯಿ ಸಮಸ್ಯೆ ಮುಗಿದು ಹೋದ ಅಧ್ಯಾಯ. ಈಗಾಗಲೇ ಅದು ಸಹ ನಮ್ಮ ಪರ ಅವಾರ್ಡ್ ಆಗಿದೆ. ಈಗ ಕೇವಲ ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಮ್ಮತಿ ಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಹದಾಯಿ ವಿವಾದ ಮುಗಿದ ಅಧ್ಯಾಯ: ಸಚಿವ ಜಗದೀಶ್ ಶೆಟ್ಟರ್ - Mahadayi issue news
ಮಹದಾಯಿ ಸಮಸ್ಯೆ ಮುಗಿದ ಅಧ್ಯಾಯ, ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಈಗ ಕೇವಲ ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಮ್ಮತಿ ಬೇಕಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಸಮಸ್ಯೆ ಮುಗಿದು ಹೋದ ಅಧ್ಯಾಯ. ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಈಗ ಕೇವಲ ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಮ್ಮತಿ ಬೇಕಾಗಿದೆ ಎಂದರು.
ಅಷ್ಟೇ ಅಲ್ಲದೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸಹ 500 ಕೋಟಿ ರೂಪಾಯಿ ಹಣವನ್ನು ಕಾಮಗಾರಿಗೆ ತೆಗೆದಿಟ್ಟಿದ್ದಾರೆ. ಅನಾವಶ್ಯಕವಾಗಿ ಪ್ರಚೋದನೆ ಮಾಡುವ ಕೆಲಸ ನಡಿತಾ ಇದೆ. ಆದರೆ ಮಹದಾಯಿ ವಿಷಯದಲ್ಲಿ ಕಾನೂನು ರೀತಿಯಾಗಿ ನಾವು ಜಯಶಾಲಿಯಾಗಿದ್ದೇವೆ ಎಂದು ಸಚಿವ ಶೆಟ್ಟರ್ ಹೇಳಿದ್ರು.
Last Updated : Oct 8, 2020, 7:40 PM IST