ಕರ್ನಾಟಕ

karnataka

ETV Bharat / state

ಆಸ್ತಿ ವಿವಾದ: ಧಾರವಾಡದಲ್ಲಿ ವ್ಯಕ್ತಿ ಬರ್ಬರ ಕೊಲೆ - ಧಾರವಾಡಲ್ಲಿ ವ್ಯಕ್ತಿ ಕೊಲೆ

ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಉಂಟಾದ ಜಗಳದಲ್ಲಿ ವೃದ್ಧ ವ್ಯಕ್ತಿ ಬರ್ಬರವಾಗಿ ಕೊಲೆಯಾಗಿದ್ದಾರೆ.

Dharwad
ಧಾರವಾಡದಲ್ಲಿ ವ್ಯಕ್ತಿ ಬರ್ಬರ ಕೊಲೆ

By

Published : Nov 5, 2021, 7:22 PM IST

ಧಾರವಾಡ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧರೊಬ್ಬರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ನಡೆದಿದೆ.

ವಿರುಪಾಕ್ಷಪ್ಪ ಆಚಮಟ್ಟಿ (58) ಮೃತ ದುರ್ದೈವಿ. ಲಕ್ಷಣ ಎಂಬಾತ ಕೊಲೆಗೈದ ಆರೋಪಿ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಉಂಟಾದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತದೇಹ

ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಸಿಎಂ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ ರದ್ದು

ABOUT THE AUTHOR

...view details