ಕರ್ನಾಟಕ

karnataka

ETV Bharat / state

ಮಾನಸಿಕ‌ ಅಸ್ವಸ್ಥ ಮಹಿಳೆಯನ್ನು‌ ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್​​ ಸಿಬ್ಬಂದಿ ನಿರಾಕರಣೆ? - ಮಾನಸಿಕ  ಅಸ್ವಸ್ಥ ಮಹಿಳೆ

ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಅನಾಥವಾಗಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು‌ ಆ್ಯಂಬುಲೆನ್ಸ್​​ ಸಿಬ್ಬಂದಿ ನಕಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಾನಸಿಕ‌ ಮಹಿಳೆಯನ್ನು‌ ಆಸ್ಪತ್ರೆಗೆ ಸೇರಿಸಲು ಅಂಬ್ಯೂಲೆನ್ಸ್ ಸಿಬ್ಬಂದಿ ನಕಾರ

By

Published : Aug 29, 2019, 6:25 PM IST

ಧಾರವಾಡ: ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಅನಾಥವಾಗಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು‌ ಆ್ಯಂಬುಲೆನ್ಸ್​​ ಸಿಬ್ಬಂದಿ ನಕಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅನಾಥವಾಗಿ ಬಿದ್ದ ಮಾನಸಿಕ ಅಸ್ವಸ್ಥೆ: ಸಹಾಯಕ್ಕೆ ಬಾರದ ಆ್ಯಂಬುಲೆನ್ಸ್​​ ಸಿಬ್ಬಂದಿ

ಅಳ್ನಾವರ ಪಟ್ಟಣದ ಕರ್ನಾಟಕ ಬ್ಯಾಂಕ್ ಎದುರು ಅಪರಿಚಿತ ಮಹಿಳೆಯೊಬ್ಬಳು ಮಾನಸಿಕ‌ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದು ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಆದರೆ ಆ್ಯಂಬುಲೆನ್ಸ್​​ ಸಿಬ್ಬಂದಿ ಸಹಾಯಕ್ಕೆ ಬರಲು ನಕಾರ ಮಾಡಿದ್ದು, ಅನಾಥ ರೋಗಿಗಳನ್ನು ಕರೆತರಲು ಆಗುವುದಿಲ್ಲವೆಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details