ಹುಬ್ಬಳ್ಳಿ :ಸೂಕ್ತ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ನಗರದ ಕೋವಿಡ್ ಕೇರ್ ಸೆಂಟರ್ನಲ್ಲಿರುವ ರೋಗಿಗಳು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆ: ಸಿಬ್ಬಂದಿ ವಿರುದ್ಧ ಸೋಂಕಿತರ ಆಕ್ರೋಶ - ಹುಬ್ಬಳ್ಳಿ ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆ
ಸರಿಯಾಗಿ ಸುಚಿತ್ವ ಕಾಪಾಡುತ್ತಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿಯ ಸಂಜೀವಿನಿ ಕೋವಿಡ್ ಕೇರ್ ಸೆಂಟರ್ನಲ್ಲಿರುವ ರೋಗಿಗಳು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕುಲ ರಸ್ತೆಯ ಕೆ.ಎಸ್ ಶರ್ಮಾ ಆವರಣದಲ್ಲಿರುವ ಸಂಜೀವಿನಿ ಕೋವಿಡ್ ಕೇರ್ ಸೆಂಟರ್ನಲ್ಲಿ ಶೌಚಾಲಯ ಹಾಗೂ ಸ್ನಾನಗೃಹಗಳು ಗಬ್ಬೆದ್ದು ನಾರುತ್ತಿದ್ದು, ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಶೌಚಾಲಯ ಸ್ವಚ್ಛ ಮಾಡಿ ವಾರಗಳೇ ಕಳೆದಿವೆ. ಅಲ್ಲದೇ, ಬೇಕಾ ಬಿಟ್ಟಿಯಾಗಿ ಕಸ ಗುಡಿಸುತ್ತಾರೆ. ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸಬೂಬು ಹೇಳಿ ಹೋಗುತ್ತಿದ್ದಾರೆ ಎಂದು ಕೋವಿಡ್ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿಗೆ ಬಂದು ಆರು ದಿನಗಳು ಕಳೆದಿವೆ. ಈ ಅವಧಿಯಲ್ಲಿ ಒಂದು ಬಾರಿ ಮಾತ್ರ ಶೌಚಾಲಯ ಸುಚಿಗೊಳಿಸಲಾಗಿದೆ. ಇಲ್ಲಿ ಸೋಂಕು ನಿವಾರಣೆ ಆಗುವ ಬದಲು ಹೆಚ್ಚುವ ಲಕ್ಷಣಗಳಿವೆ ಎಂದು ಸೋಂಕಿರು ಅಳಲು ತೋಡಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.