ಕರ್ನಾಟಕ

karnataka

ETV Bharat / state

ಅವಳಿ ನಗರದಲ್ಲಿ ಮಳೆಗಾಲಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಶೆಟ್ಟರ್​ ಸೂಚನೆ - Minister Shetter watched road work in Hubli

ಅವಳಿ ನಗರದಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಶೆಟ್ಟರ್​ ಸೂಚನೆ
ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಶೆಟ್ಟರ್​ ಸೂಚನೆ

By

Published : May 18, 2020, 5:06 PM IST

ಹುಬ್ಬಳ್ಳಿ:ಅವಳಿ ನಗರದಲ್ಲಿ ಲೋಕೋಪಯೋಗಿ ಇಲಾಖೆ, ಸಿ.ಆರ್.ಎಫ್ ಹಾಗೂ ವಿಶೇಷ ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಇಂದು ಹುಬ್ಬಳ್ಳಿಯ ರಾಜೀವ ನಗರದಲ್ಲಿ ಲೋಕೋಪಯೋಗಿ ಇಲಾಖೆ 5 ಕೋಟಿ ರೂ. ಅನುದಾನದಡಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಸರ್ಕಾರ ರಚನೆಯಾದ ಹತ್ತು ತಿಂಗಳಲ್ಲಿ ಅವಳಿ ನಗರದ ಮುಖ್ಯ ಹಾಗೂ ಒಳ ರಸ್ತೆಗಳನ್ನು ನಿರ್ಮಿಸಿ ನಗರದ ಚಿತ್ರಣ ಬದಲು ಮಾಡುವ ಆಶಯ ಸರ್ಕಾರಕ್ಕೆ ಇತ್ತು. ಕೊರೊನಾದಿಂದಾಗಿ ತಾತ್ಕಾಲಿಕವಾಗಿ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಲಾಕ್​​ಡೌನ್ ಸಡಿಲವಾದ ನಂತರ ಈ ಕಾಮಗಾರಿಗಳಿಗೆ ಮರು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಶೆಟ್ಟರ್​ ಸೂಚನೆ

ಲೋಕೋಪಯೋಗಿ ಇಲಾಖೆಯ 35 ಕೋಟಿ ಅನುದಾನದಲ್ಲಿ ಹುಬ್ಬಳ್ಳಿ ನಗರದ ಪ್ರಮುಖ ಏರಿಯಾಗಳ ಒಳ ರಸ್ತೆಗಳನ್ನು ಮುಖ್ಯ ರಸ್ತೆಗೆ ಸಂಪರ್ಕಿಸುವ ಕಾರ್ಯ ಮಾಡಲಾಗುತ್ತಿದೆ. ನೆರೆಯಲ್ಲಿ ಹಾನಿಯಾದ ಸೇತುವೆಗಳ ನಿರ್ಮಾಣಕ್ಕಾಗಿ 8 ಕೋಟಿ ವಿಶೇಷ ಅನುದಾನ ಸಹ ನೀಡಲಾಗಿದೆ. ಇದರಲ್ಲಿ 3 ಸೇತುವೆಗಳ ಕಾರ್ಯ ಪೂರ್ಣಗೊಂಡಿದೆ. ವಾರ್ಡ್ ನಂಬರ್ 35ರಲ್ಲಿ 15 ಕೋಟಿ ವೆಚ್ಚದಲ್ಲಿ ಎಲ್ಲಾ ರಸ್ತೆಗಳ ನಿರ್ಮಾಣ, ಡಾಂಬರೀಕರಣ ಹಾಗೂ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಲಾಗಿದೆ. ನಗರವನ್ನು ಸಂಪರ್ಕಿಸುವ ಮುಖ್ಯ ರಸ್ತೆಗಳ ಅಗಲೀಕರಣ, ವರ್ತಲ ರಸ್ತೆ ಕಾಮಗಾರಿಗಳು ಬಹುತೇಕ ಮುಗಿಯುವ ಹಂತಕ್ಕೆ ಬಂದಿವೆ. ಫ್ಲೈ ಓವರ್ ಹಾಗೂ ಓವರ್ ಬ್ರಿಡ್ಜ್​​ಗಳ ನಿರ್ಮಾಣ ಬಾಕಿ ಇವೆ ಎಂದು ಮಾಹಿತಿ ನೀಡಿದರು.

ರಸ್ತೆ ಕಾಮಗಾರಿ ವೀಕ್ಷಿಸಿದ ಸಚಿವ ಶೆಟ್ಟರ್​

ಚೆನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣಕ್ಕೆ ಟೆಂಡರ್​:ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದು, 350 ಕೋಟಿ ರೂಪಾಯಿಗಳನ್ನು ನೀಡಿದ್ದಾರೆ. ಅಂದಾಜು‌ 850‌ರಿಂದ 900 ಕೋಟಿ ವೆಚ್ಚದ ಈ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಹುಬ್ಬಳ್ಳಿ-ಧಾರವಾಡ ಮಧ್ಯದ 2 ಪಥದ ಹೆದ್ದಾರಿಯನ್ನು ಆರು ಪಥದ ರಸ್ತೆಯನ್ನಾಗಿಸಲು ಯೋಜನೆ ರೂಪಿಸಲಾಗಿದೆ ಎಂದರು.

For All Latest Updates

TAGGED:

ABOUT THE AUTHOR

...view details