ಕರ್ನಾಟಕ

karnataka

By

Published : Aug 7, 2020, 8:14 PM IST

ETV Bharat / state

ಧಾರವಾಡ: ಅತ್ಯಾಚಾರ ಸಂತ್ರಸ್ತ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ

ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ, ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿ, ಆರೋಪಿಗೆ ಸರಿಯಾದ ರೀತಿಯಲ್ಲಿ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಅತ್ಯಾಚಾರಕ್ಕೊಳಗಾದ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ
ಅತ್ಯಾಚಾರಕ್ಕೊಳಗಾದ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿಅತ್ಯಾಚಾರಕ್ಕೊಳಗಾದ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ

ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ಮೊನ್ನೆಯಷ್ಟೆ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿದರು.

ಇದೇ ವೇಳೆ ಇಂತಹ ಕ್ರೂರ ಕೃತ್ಯವೆಸಗಿರುವ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಹೊಲಕ್ಕೆ ಪೂಜೆ ಮಾಡಲೆಂದು ಹೋಗಿದ್ದ ಬೋಗೂರು ಗ್ರಾಮದ 14 ವರ್ಷದ ಬಾಲಕಿ ಮೇಲೆ ಸಿಂಗನಹಳ್ಳಿ ಗ್ರಾಮದ ಬಸೀರ್ ಎಂಬಾತ ಅತ್ಯಾಚಾರವೆಸಗಿದ್ದ ಇದರಿಂದ ಮನನೊಂದ ಬಾಲಕಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ABOUT THE AUTHOR

...view details