ಕರ್ನಾಟಕ

karnataka

ಆರೋಗ್ಯಕರ ಭಾರತಕ್ಕೆ ನಾವೆಲ್ಲರೂ ಒಗ್ಗಟ್ಟಾಗಿ ಕೈಜೋಡಿಸಬೇಕು.. ಶಾಸಕ ಪ್ರಸಾದ್‌ ಅಬ್ಬಯ್ಯ

By

Published : Apr 7, 2020, 3:06 PM IST

ಈಗಾಗಲೇ ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕೊರೊನಾ ವೈರಸ್ ಸಂಬಂಧಿಸಿದ ಸಾಕಷ್ಟು ಜಾಗೃತಿ ಮಾಹಿತಿ ಸಿಗುತ್ತಿದೆ. ಪ್ರಧಾನಮಂತ್ರಿಯವರು 21 ದಿನಗಳ ಕಾಲ ಲಾಕ್​ಡೌನ್ ಮಾಡಿದ್ದಾರೆ. ಅದನ್ನು ಸ್ವಾಗತ ಮಾಡುವುದಷ್ಟೇ ಅಲ್ಲ, ಅದನ್ನು ಕಟ್ಟುನಿಟ್ಟಾಗಿ ಪಾಲಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ.

mla-prasad-abbayya
ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ :ಕೊರೊನಾ ವೈರಸ್​ನಿಂದ ಪಾರಾಗಲು ನಮಗಿರುವ ಒಂದೇ ಮಾರ್ಗವೆಂದರೆ ಅದು ಸಾಮಾಜಿಕ ಅಂತರ ಕಾಯ್ದುಕೊಳ್ಳವುದು ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ವಿಡಿಯೋ ಸಂದೇಶ ನೀಡಿದ್ದಾರೆ.

ಈಗಾಗಲೇ ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕೊರೊನಾ ವೈರಸ್ ಸಂಬಂಧಿಸಿದ ಸಾಕಷ್ಟು ಜಾಗೃತಿ ಮಾಹಿತಿ ಸಿಗುತ್ತಿದೆ. ಪ್ರಧಾನಮಂತ್ರಿಯವರು 21 ದಿನಗಳ ಕಾಲ ಲಾಕ್​ಡೌನ್ ಮಾಡಿದ್ದಾರೆ. ಅದನ್ನು ಸ್ವಾಗತ ಮಾಡುವುದಷ್ಟೇ ಅಲ್ಲ, ಅದನ್ನು ಕಟ್ಟುನಿಟ್ಟಾಗಿ ಪಾಲಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ.

ಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ..

ಈ ವೈರಸ್ ವಿರುದ್ಧ ನಾವೆಲ್ಲರೂ ಕೂಡಿ ಜಾಗೃತಿ ಮೂಡಿಸುವ ಕೆಲಸ ಹಾಗೂ ಮನೆಯಿಂದ ಹೊರ ಬರದೆ ಸದೃಢ ಆರೋಗ್ಯಕರ ಭಾರತ ನಿರ್ಮಾಣಕ್ಕೆ ಒಗ್ಗಟ್ಟಾಗಿ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದು ಕೊರೊನಾ ಕುರಿತ ವಿಡಿಯೋ ಸಂದೇಶದಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details