ಹುಬ್ಬಳ್ಳಿ :ಇಲ್ಲಿನರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಪರಸ್ಪರ ಡಿಕ್ಕಿ ಹೊಡೆದುಕೊಂಡು ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್ಡಿಎಂ ಬಿ ತಂಡಗಳ ನಡುವೆ ನಡೆದ ಪಂದ್ಯದವೇಳೆ ಈ ಘಟನೆ ನಡೆದಿದೆ. 19ನೇ ಓವರ್ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು ಪ್ರಜ್ವಲ್ ಬೋರಣ್ಣನವರ ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದಾರೆ.
ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಕ್ಲಬ್ನ ಸದಸ್ಯರು, ಪಂದ್ಯ ನೋಡುತ್ತಿದ್ದವರು ಮತ್ತು ಕೆಎಸ್ಸಿಎ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿತ್ತು.