ಹುಬ್ಬಳ್ಳಿ:ವಚನಶ್ರೀ ಎಂದೇ ಖ್ಯಾತರಾಗಿದ್ದ ಸಾಹಿತಿ ಡಾ.ಸಂಗಮೇಶ ಹಂಡಿಗಿ (84) ಇಂದು ನಿಧನರಾದರು. ಕನ್ನಡ ಸಾಹಿತ್ಯ ಲೋಕಕ್ಕೆ 46 ಗ್ರಂಥಗಳ ಕಾಣಿಕೆ ನೀಡಿರುವ ಡಾ.ಹಂಡಿಗಿಯವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ನವಲಗುಂದದ ಶ್ರೀ ಶಂಕರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗ ಮುಖ್ಯಸ್ಥರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಸಂದರ್ಶಕ ಪ್ರಾಧ್ಯಾಪಕರಾಗಿ ಪಿಎಚ್ಡಿ ಅಧ್ಯಯನ ವಿದ್ಯಾರ್ಥಿಗಳಿಗೆ ಇವರು ಮಾರ್ಗದರ್ಶನ ನೀಡಿದ್ದರು.
ವಿಮರ್ಶಾತ್ಮಕ ಪ್ರಬಂಧಗಳಾದ ಭಕ್ತಿ, ಭಕ್ತಿಮಾರ್ಗ, ಜನಪದ ಸಾಹಿತ್ಯ ಮತ್ತು ದೈವಿ ಶ್ರದ್ಧೆ, ದಶಧರ್ಮ, ಸಂಸ್ಕೃತಿ ಸೌರಭ, ನುಡಿ-ಮಿಡಿ, ಶರಣಾನುಭವ, ವಚನಸ್ತವನ, ವಚನಮಯೂರ, ಕಾವ್ಯಸಂಗಮ, ಕಾವ್ಯಗೌರವ, ನೆನೆದವರ ಮನದಲ್ಲಿ ಸೇರಿದಂತೆ ಜೀವನ ಚರಿತ್ರೆ ಬರೆದಿದ್ದಾರೆ.