ಕರ್ನಾಟಕ

karnataka

ಸಲಕಿನಕೊಪ್ಪ ಗ್ರಾಮದ ಶೂಟೌಟ್ ಪ್ರಕರಣ: ಮೂವರು ಆರೋಪಿಗಳ ಬಂಧನ

By

Published : Sep 29, 2019, 5:51 AM IST

ಸಲಕಿನಕೊಪ್ಪ ಗ್ರಾಮದಲ್ಲಿ ಸೆಪ್ಟೆಂಬರ್​ 25ರಂದು ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶ್ಯಾಮ್​ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು.

Police arrested accused

ಧಾರವಾಡ:ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳಿಯಾಳ ರಸ್ತೆಯ ಸಲಕಿನಕೊಪ್ಪ ಗ್ರಾಮದ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಪ್ಟೆಂಬರ್ ​25ರಂದು ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದ ಶ್ಯಾಮ್​ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸುಬ್ರಮಣ್ಯ ಗೋಪಿ ಸಮರೂ, ರಾಜೇಶ ರಾಜು ರುದ್ರಪಾಟಿ ಮತ್ತು ಗೌರೀಶ ಉಳವಪ್ಪ ಸುಳ್ಳದ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ABOUT THE AUTHOR

...view details