ಕರ್ನಾಟಕ

karnataka

By

Published : Jan 17, 2020, 3:31 PM IST

ETV Bharat / state

ಅಮಿತ್ ಶಾ ಆಗಮನಕ್ಕೆ ನಗರದಲ್ಲಿ ಹೆಚ್ಚಿನ ಬಿಗಿ ಭದ್ರತೆ: ಆರ್. ದಿಲೀಪ್

ಪೌರತ್ವ ತಿದ್ದುಪಡಿ ಕಾಯ್ದೆಯ ಜಾಗೃತಿ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಹಾಗೂ ಅವಳಿನಗರದಲ್ಲಿ ಸಿಸಿ ಕ್ಯಾಮರಾ ಮತ್ತು ಡ್ರೋನ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಹು ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್ ಹೇಳಿದರು.

police-commissioner-r-deelip-speak-about-amith-sha
ಆಯುಕ್ತ ಆರ್. ದೀಲಿಪ್

ಹುಬ್ಬಳ್ಳಿ:ಪೌರತ್ವ ತಿದ್ದುಪಡಿ ಕಾಯ್ದೆಯ ಜಾಗೃತಿ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋ ಬಸ್ತ್ ಹಾಗೂ ಅವಳಿನಗರದಲ್ಲಿ ಸಿಸಿಕ್ಯಾಮರಾ ಮತ್ತು ಡ್ರೋನ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಹು ಧಾ ಪೋಲಿಸ್ ಆಯುಕ್ತ ಆರ್ ದಿಲೀಪ್ ಹೇಳಿದರು.

ಸಿಎಎ ಜಾಗೃತಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗುವ ಪ್ರಯುಕ್ತ ಪೊಲೀಸ್ ಆಯುಕ್ತರಿಂದ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು' ನಾಳಿನ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ನೀಡಲಾಗಿದೆ. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದ್ದು, ಗಣ್ಯ ವ್ಯಕ್ತಿಗಳ ಕಾರ್ಯಕ್ರಮಕ್ಕೆ ಯಾವ ರೀತಿಯ ಭದ್ರತೆ ನೀಡಬೇಕು. ಆ ರೀತಿಯ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಅಮಿತ್ ಶಾ ಆಗಮನಕ್ಕೆ ನಗರದಲ್ಲಿ ಹೆಚ್ಚಿನ ಬಿಗಿ ಭದ್ರತೆ: ಆರ್. ದಿಲೀಪ್

ನಮಗೆ ಹುಬ್ಬಳ್ಳಿ ಧಾರವಾಡ ಪೊಲೀಸರು ಸೇರಿದಂತೆ ವಿವಿಧೆಡೆಯಿಂದ ಹೆಚ್ಚುವರಿ ಪೊಲೀಸ್ ಪಡೆ ಕರೆಸಿಕೊಳ್ಳಲಾಗಿದೆ. ಕೇಂದ್ರ ಗೃಹಅಮಿತಾ ಶಾ ಭೇಟಿ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಧರಣಿಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಕೇಲವರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದಕ್ಕೆ ಅವಕಾಶವಿಲ್ಲ. ಅಂತಹ ಘಟನೆಗಳೆನ್ನಾದರೂ ಆದ್ರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನೂ ಕಾರ್ಯಕ್ರಮಕ್ಕೆ ಮುಂಜಾಗ್ರತಾ ಕ್ರಮ ಅನ್ವಯ ಏನೇನು ಮಾಡಬೇಕು ಅದನ್ನು ಮಾಡಲಾಗಿದೆ ಎಂದರು.

ABOUT THE AUTHOR

...view details