ಕರ್ನಾಟಕ

karnataka

ETV Bharat / state

ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ - Prahlad Joshi latest news

ಹುಬ್ಬಳ್ಳಿ ನಗರದ  ದೇಶಪಾಂಡೆ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ, ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.

-caa-awareness-program
ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ

By

Published : Jan 13, 2020, 6:15 PM IST

ಹುಬ್ಬಳ್ಳಿ: ನಗರದ ದೇಶಪಾಂಡೆ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ, ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇದೇ 18ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹುಬ್ಬಳ್ಳಿ ನಗರಕ್ಕೆ ಭೇಟಿ ನೀಡುತ್ತಿದ್ದು,ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಮೂಲಕ ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಅಂದು ನಡೆಯಲಿರು ಸಮಾವೇಶ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಜನರಲ್ಲಿರುವ ಆತಂಕ ಹಾಗೂ ತಪ್ಪು ತಿಳುವಳಿಕೆಯನ್ನು ದೂರಮಾಡಲಿದೆ ಎಂದು ತಿಳಿಸಿದರು.

ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ

ಸಭೆಯಲ್ಲಿ ಸಚಿವ ಜಗದೀಶ್​ ಶೆಟ್ಟರ್​, ಶಾಸಕ ಅರವಿಂದ ಬೆಲ್ಲದ, ಬಾನುಪ್ರಕಾಶ, ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ, ಶಿವಾನಂದ ಮುತ್ತಣ್ಣವರ ಸೇರಿದಂತೆ ಇತರರು ಇದ್ದರು.

For All Latest Updates

ABOUT THE AUTHOR

...view details