ಕರ್ನಾಟಕ

karnataka

ETV Bharat / state

ಬ್ಯಾಂಕ್​ಗಳ ವಿಲೀನ, ಖಾಸಗೀಕರಣ ವಿರೋಧಿಸಿ ಬ್ಯಾಂಕ್​ ನೌಕರರ ಪಂಜಿನ ಮೆರವಣಿಗೆ - ‘Protest against the merging of nationalized banks

ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಯಿತು. ಪಂಜಿನ ಮೆರವಣಿಗೆಯು ಕಾಟನ್ ಮಾರ್ಕೆಟ್​ನಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಾರ್ಪೊರೇಷನ್ ಬ್ಯಾಂಕ್​ ಹಿಂಬದಿಯಲ್ಲಿ ಮುಕ್ತಾಯವಾಯಿತು.

Protest against the merging and privatization of nationalized banks
ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ, ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

By

Published : Jan 11, 2020, 4:31 AM IST

ಹುಬ್ಬಳ್ಳಿ:ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಯಿತು.

ನಗರದ ಕಾಟನ್ ಮಾರ್ಕೆಟ್​ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾರ್ಪೊರೇಷನ್ ಬ್ಯಾಂಕ್​ ಹಿಂಬದಿಯಲ್ಲಿ ಅಂತ್ಯವಾಯಿತು. ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಹುಬ್ಬಳ್ಳಿಯಲ್ಲಿ ಬ್ಯಾಂಕ್​ಗಳ ವಿಲೀನ, ಖಾಸಗೀಕರಣ ವಿರೋಧಿಸಿ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು

ಕೆನರಾ ಬ್ಯಾಂಕ್​, ಕರ್ನಾಟಕ ಬ್ಯಾಂಕ್, ಕಾರ್ಪೊರೇಷನ್‌ ಬ್ಯಾಂಕ್‌, ಎಸ್‌ಬಿಐ ಸೇರಿದಂತೆ ಇತರೆ ರಾಷ್ಟ್ರೀಕೃತ ಬ್ಯಾಂಕ್​ಗಳ ನೂರಾರು ಸಿಬ್ಬಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. 'ರಾಷ್ಟ್ರೀಕೃತ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಲಾಗುತ್ತಿದ್ದು, ಇದರಿಂದ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳಿಗೆ ಅಭದ್ರತೆ ಕಾಡುತ್ತಿದೆ. ಇಂತಹ ನಿರ್ಧಾರಗಳು ಖಂಡನಾರ್ಹ ' ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾಂಕ್​ಗಳಿಂದ ದೊಡ್ಡ ಮೊತ್ತದ ಸಾಲ ಪಡೆದು ಮರುಪಾವತಿಸದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಸಾಲ ವಸೂಲಾತಿ ಮಾಡಬೇಕು. ಇಲ್ಲವಾದಲ್ಲಿ ಬ್ಯಾಂಕ್​ಗಳು ದಿವಾಳಿ ಆಗಲಿವೆ. ಈ ಬಗ್ಗೆ ತುರ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಒತ್ತಾಯಿಸಿದರು. ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆಗೆ ಇತರೆ ಕಾರ್ಮಿಕ ಸಂಘಟನೆಗಳು ಸಹ ಬ್ಯಾಂಕ್ ನೌಕರರಿಗೆ ಬೆಂಬಲ ನೀಡಿ ಧರಣಿಯಲ್ಲಿ ಭಾಗವಹಿಸಿದ್ದವು.

ABOUT THE AUTHOR

...view details