ಕರ್ನಾಟಕ

karnataka

ETV Bharat / state

ಶೌಚಾಲಯ ತೆರವುಗೊಳಿಸುವಂತೆ ಆಗ್ರಹ: ಧಾರವಾಡದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಶೌಚಾಲಯದಿಂದ ದುರ್ವಾಸನೆ ಬರುತ್ತಿರುವುದಕ್ಕೆ ಮೃತ್ಯುಂಜಯ ನಗರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಶೌಚಾಲಯ ಸ್ವಚ್ಚಗೊಳಿಸಿ ಎಂದು ಆಗ್ರಹಿಸಿದ್ದಾರೆ.

By

Published : May 7, 2020, 2:41 PM IST

Updated : May 7, 2020, 3:57 PM IST

protest
protest

ಧಾರವಾಡ: ಲಾಕ್​​​​​​ಡೌನ್ ಸಡಿಲಿಕೆ ಬೆನ್ನಲ್ಲೇ ಶೌಚಾಲಯ ಸ್ವಚ್ಚಗೊಳಿಸಿ ಇಲ್ಲವೇ ಶೌಚಾಲಯ ತೆರವುಗೊಳಿಸಿ ಎಂದು ಆಗ್ರಹಿಸಿ ಧಾರವಾಡದ ಮೃತ್ಯುಂಜಯ ನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಧಾರವಾಡದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಶೌಚಾಲಯದಿಂದ ದುರ್ವಾಸನೆ ಬರುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾ ವೈರಸ್ ಭೀತಿ ಹಿನ್ನೆಲೆ ಶೌಚಾಲಯ ಸ್ವಚ್ಚಗೊಳಿಸಿ ಎಂದು ಆಗ್ರಹಿಸಿದ್ದಾರೆ.

ಮಹಾನಗರ ಪಾಲಿಕೆಯ ವಿರುದ್ಧ ಅಸಮಾಧಾನ ಹೊರಹಾಕಿದ ಸ್ಥಳೀಯರು ರೋಡ್ ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರೊಂದಿಗೆ ಸಾರ್ವಜನಿಕರು ವಾಗ್ವಾದ ನಡೆಸಿದರು. ಪ್ರತಿಭಟನೆಯಿಂದ ರಸ್ತೆ ಸಂಚಾರವೂ ಅಸ್ತವ್ಯಸ್ತಗೊಂಡಿತ್ತು.

Last Updated : May 7, 2020, 3:57 PM IST

ABOUT THE AUTHOR

...view details