ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ-ಧಾರವಾಡದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಢಾಪನೆಗೆ ನಿಷೇಧ - Public ganesh festival banned in dharwad

ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿಷೇಧ ವಿಧಿಸಲಾಗಿದೆ. ಕೊರೊನಾ ಹಿನ್ನೆಲೆ ಗಣೇಶ ಮಂಡಳಿಯವರು ಇಲಾಖೆ ನಿಯಮಗಳನ್ನು ಪಾಲಿಸುವಂತೆ ಆದೇಶ ನೀಡಿದರು.

Public ganesh festival banned in dharwad
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಢಾಪನೆಗೆ ನಿಷೇಧ

By

Published : Aug 12, 2020, 4:14 AM IST

ಹುಬ್ಬಳ್ಳಿ:ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೂ ಈ ಬಾರಿ ಕೊರೊನಾ ಅಡ್ಡಗಾಲು ಹಾಕಿದೆ. ಯಾವುದೇ ಸಾರ್ವಜನಿಕ ಗಣೇಶೋತ್ಸವ ನಡೆಸದಂತೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಈ ಕುರಿತಂತೆ ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವಳಿ ನಗರದ ಪೊಲೀಸರು ಗಣೇಶ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಢಾಪನೆಗೆ ನಿಷೇಧ

ಕೋವಿಡ್ ಸೋಂಕು ಹರಡು‌ ಭೀತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧ ಹೇರಲಾಗಿದೆ. ಗಣೇಶ ಮಂಡಳಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ 5 ಜನರನ್ನು ಒಳಗೊಂಡು ಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಪಿಒಪಿ ಗಣೇಶ ಸ್ಥಾಪನೆಗೆ ಅವಕಾಶವಿಲ್ಲ ಎಂದು ಸೂಚಿಸಿದೆ.

ಸಾರ್ವಜನಿಕ ಮೆರವಣಿಗೆ, ಡಿಜೆ, ಧ್ವನಿವರ್ಧಕ ಹಾಗೂ ಸಿಡಿಮದ್ದುಗಳಿಗೆ ಅವಕಾಶವಿಲ್ಲ. ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಂದ ಪಿಒಪಿ ಗಣೇಶ ತರುವಂತಿಲ್ಲ. ಈ‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ABOUT THE AUTHOR

...view details