ಹುಬ್ಬಳ್ಳಿ: ಎಲ್ಲೆಂದರಲ್ಲಿ ರಸ್ತೆಯ ಮಧ್ಯೆ ತಗ್ಗು, ಗುಂಡಿಗಳು, ಧೂಳು. ನಿತ್ಯವು ವಾಹನ ಸವಾರರು ಆತಂಕದಲ್ಲಿಯೇ ಸಾಗಬೇಕಿದೆ. ಇದು ಸ್ಮಾಟ್ ಸಿಟಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ ಎಂದರೇ ನಂಬಲೇ ಬೇಕು.
ಸ್ಮಾರ್ಟ್ ಸಿಟಿ ರಸ್ತೆಗಳಲ್ಲಿ ಗುಂಡಿಗಳ ಕಾಟ: ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರ ಅಸಮಾಧಾನ
ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಹುಬ್ಬಳ್ಳಿಯು ಸೇರಿದೆ. ಆದರೆ, ಇಲ್ಲಿನ ರಸ್ತೆಗಳ ತುಂಬ ಗುಂಡಿಗಳೆ ತುಂಬಿಕೊಂಡಿದ್ದು, ಸಾರ್ವಜನಿಕರು ನಿತ್ಯ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
ಸ್ಮಾರ್ಟ್ ಸಿಟಿ ರಸ್ತೆಗಳಲ್ಲಿ ಗುಂಡಿಗಳ ಸಮಸ್ಯೆ
ವಾಣಿಜ್ಯ ನಗರಿ ಹುಬ್ಬಳ್ಳಿಯ ಕಾಟನ್ ಮಾರುಕಟ್ಟೆಯ ರಸ್ತೆ ಸವಾರರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಅವೈಜ್ಞಾನಿಕ ಉಬ್ಬುಗಳಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ಅನೇಕ ಬಾರಿ ಅಪಘಾತಗಳು ಸಂಭವಿಸಿವೆ. ಇಷ್ಟಾದರೂ ಪಾಲಿಕೆ ಹಾಗೂ ಜಿಲ್ಲಾಡಳಿತ ದುರಸ್ತಿಗೆ ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಹನ ಸವಾರರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.