ಕರ್ನಾಟಕ

karnataka

By

Published : Jan 2, 2023, 3:32 PM IST

Updated : Jan 2, 2023, 5:14 PM IST

ETV Bharat / state

ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ನಿಯೋಜನೆ: ಲಾಬೂರಾಮ್ ವರ್ಗಾವಣೆ

ಲಾಬೂರಾಮ್ ಅವರಿಗೆ ಬಡ್ತಿ ನೀಡಿ ವರ್ಗಾವಣೆ - ಐಜಿಪಿ ಇಂಟಲಿಜೆನ್ಸ್ ವಿಭಾಗಕ್ಕೆ ಲಾಬೂರಾಮ್ ಅವರಿಗೆ ಬಡ್ತಿ - ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ನೇಮಕ.

Raman Gupta appointed as Commissioner of Police Hubli Dharwad
ಲಾಬೂರಾಮ್

ಹುಬ್ಬಳ್ಳಿ:ಹುಬ್ಬಳ್ಳಿ - ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರಿಗೆ ಬಡ್ತಿ ನೀಡಿ ಐಜಿಪಿ ಇಂಟಲಿಜೆನ್ಸ್ ವಿಭಾಗಕ್ಕೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಕಮೀಷನರೇಟ್​ಗೆ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ಆಗಮಿಸಲಿದ್ದಾರೆ.

ಲಾಬೂರಾಮ್ ಹು -ಧಾ ಮಹಾನಗರ ಪೊಲೀಸ್ ಆಯುಕ್ತ ಸುಮಾರು ದಿನಗಳ ಕಾಲ ಸೇವೆ ಸಲ್ಲಿಸಿದ್ದು, ಈಗ ಬಡ್ತಿ ನೀಡಿ ವರ್ಗಾವಣೆ ಆದೇಶ ಹೊರಡಿಸಿದ್ದು, ಲಾಬೂರಾಮ್ ಅವರಿಂದ ತೆರವಾದ ಸ್ಥಾನಕ್ಕೆ ರಮಣ್ ಗುಪ್ತಾ ನಿಯೋಜನೆ ಮಾಡಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು, ಹು-ಧಾ ಮಹಾನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ಆಗಮಿಸಲಿದ್ದಾರೆ.

ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಕಲಬುರಗಿಯ ಐಜಿಪಿ ಎನ್​. ಸತೀಶ್​ ಕುಮಾರ್​ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಕಲಬುರಗಿಗೆ ಡಿಐಜಿಯಾಗಿ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನುಪಮಾ ಅಗರ್ವಾಲ್​ ಅವರನ್ನು ನೇಮಿಸಲಾಗಿದೆ. ಈ ಆದೇಶವನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಕಟ್ಟುನಿಟ್ಟಿನಿಂದ ಹೊಸ ವರ್ಷಾಚರಣೆಗೆ ಕಮಿಷನರ್ ಲಾಬೂರಾಮ್ ಸೂಚನೆ

Last Updated : Jan 2, 2023, 5:14 PM IST

ABOUT THE AUTHOR

...view details