ಹುಬ್ಬಳ್ಳಿ: ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ ಏಳಕ್ಕೇರಿದಂತಾಗಿದೆ. ಈ ನಡುವೆ ಬಂಧಿತರಿಬ್ಬರು ಬಚ್ಚಾಖಾನ್ ಸಹಚರರು ಎನ್ನಲಾಗಿದೆ.
ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ - Hubli Roudi Sheter Fruit Irfan Murder Case News
ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರ.

ರೌಡಿಶೀಟರ್ ಫ್ರೂಟ್ ಇರ್ಫಾನ್
ಮೈಸೂರಿನ ಶಿವರಾತ್ರಿಶೇಶ್ವನಗರದ ಬನ್ನಿಮಂಟಪ ಲೇಔಟ್ನ ಶಹಜಾನ ಕೆ.ಆಶ್ರಫ್ (24) ಹಾಗೂ ಮೈಸೂರಿನ ಗಾಂಧಿನಗರದ ಸೈಯದ್ ಸೋಹೈಲ್ ಪೀರ ಸೈಯದ್ ಆಜೀಮ್ ಪೀರ (22) ಬಂಧಿತರು. ಬಂಧಿತರಿಂದ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.