ಹುಬ್ಬಳ್ಳಿ:ಸಿಆರ್ಪಿಎಫ್ ಯೋಧ ಸೇರಿ ಐವರಿಗೆ ಕೊರೊನಾ ಕಾಣಿಸಿಕೊಂಡ ಧಾರವಾಡ ಜಿಲ್ಲೆಯ ಅಣ್ಣಿಗೇರಿಯನ್ನು ಸೀಲ್ಡೌನ್ ಮಾಡಿದರೂ, ಜನರು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ.
ಸೀಲ್ಡೌನ್ ಮಾಡಿದರೂ ಕ್ಯಾರೆನ್ನುತ್ತಿಲ್ಲ ಧಾರವಾಡದ ಅಣ್ಣಿಗೇರಿ ಪಟ್ಟಣದ ಜನ - Karnataka coronavirus upadate
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪ್ರದೇಶವನ್ನು ಸೀಲ್ಡೌನ್ ಮಾಡಿದರೂ, ವ್ಯಾಪಾರಿಗಳು ಅಂಗಡಿ-ಮುಂಗಟ್ಟುಗಳನ್ನು ತೆರೆದು ಬೇಜವಾಬ್ದಾರಿತನ ತೋರಿದ್ದಾರೆ.

ಧಾರವಾಡದ ಅಣ್ಣಿಗೇರಿ ಪಟ್ಟಣದ ಚಿತ್ರಣ
ಧಾರವಾಡದ ಅಣ್ಣಿಗೇರಿ ಪಟ್ಟಣದ ಚಿತ್ರಣ
ಯೋಧನಿಂದ ಮೂವರಿಗೆ ಮತ್ತು ರಾಜಸ್ತಾನದಿಂದ ಅಣ್ಣಿಗೇರಿಗೆ ಬಂದವರಿಬ್ಬರಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ, ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಆದರೂ ಅದಕ್ಕೆ ಕ್ಯಾರೆ ಎನ್ನದೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲಾಗಿದೆ. ಇಷ್ಟಾದರೂ ತಾಲೂಕಾಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.