ಕರ್ನಾಟಕ

karnataka

ETV Bharat / state

ಮುಂಗಾರು ಮಳೆಗೆ ಬೆಳೆ ಹಾನಿ: ವಿಶೇಷ ಪ್ಯಾಕೇಜ್​ ಘೋಷಣೆ ಮಾಡುವಂತೆ ಶಿವಸೇನೆ ಆಗ್ರಹ - Shiv Sene demands special package

ಮುಂಗಾರು ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಆದ್ದರಿಂದ ಸರ್ಕಾರ ತಕ್ಷಣ ನೆರವಿಗೆ ಬರಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಶಿವಸೇನೆ ಪಕ್ಷದ ಕಾರ್ಯಕರ್ತರು ಆಗ್ರಹಿಸಿದರು.

Shiva Sene Protest at Hubli
ವಿಶೇಷ ಪ್ಯಾಕೇಜ್​ ಘೋಷಣೆ ಮಾಡುವಂತೆ ಶಿವಸೇನೆ ಆಗ್ರಹ

By

Published : Aug 25, 2020, 5:08 PM IST

ಹುಬ್ಬಳ್ಳಿ: ಮುಂಗಾರು ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಬೇಕೆಂದು ಶಿವಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದಲ್ಲಿ ಪ್ರತಿಭಟನೆ ಮಾಡಿದ ಪಕ್ಷದ ಕಾರ್ಯಕರ್ತರು, ಮುಂಗಾರು ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಆದ್ದರಿಂದ ಸರ್ಕಾರ ತಕ್ಷಣ ನೆರವಿಗೆ ಬರಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ತಹಶೀಲ್ದಾರ್​ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಪ್ರತಿಭಟನಾಕಾರರು

ಪ್ರತಿಭಟನೆಯಲ್ಲಿ ಶಿವ ಸೇನೆ ಪಕ್ಷದ ರಾಜ್ಯಾಧ್ಯಕ್ಷ ಕುಮಾರ್ ಹಕಾರೆ ಮುಖಂಡರಾದ ಅನಿಲ್​ , ಶಿವು ಸೇರಿದಂತೆ ಇನ್ನಿತರ ಇದ್ದರು‌.

ABOUT THE AUTHOR

...view details