ಹುಬ್ಬಳ್ಳಿ: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಪಕ್ಷದ ಓರ್ವ ನಿಷ್ಟಾವಂತ ಕಾರ್ಯಕರ್ತನಾಗಿ ಸರ್ಕಾರ ನನಗೆ ನೀಡಿದ ಸ್ಥಾನವನ್ನು ಮನಃಪೂರ್ವಕವಾಗಿ ಒಪ್ಪಿಕೊಂಡಿದ್ದೇನೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಸಿದ್ದು ಸವದಿ ಹೇಳಿದರು.
ತಮಗೆ ಒಲಿದು ಬಂದ ಸ್ಥಾನದ ಕುರಿತು ನಗರದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಅವರು, ನೇಕಾರ ಸಮುದಾಯಕ್ಕೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಸಚಿವ ಸ್ಥಾನ ನೀಡುವಂತೆ ಎಂದೂ ಕೇಳಿರಲಿಲ್ಲ. ಆದರೂ, ಮುಖ್ಯಮಂತ್ರಿಗಳು ನನ್ನನ್ನು ನಿಗಮದ ಅಧ್ಯಕ್ಷನನ್ನಾಗಿ ನೇಮಿಸಿದ್ದು ಸಂತೃಪ್ತಿ ತಂದಿದೆ ಎಂದರು.