ಧಾರವಾಡ: ಚಂದ್ರಶೇಖರ ಗುರೂಜಿ ನಿಧನ ಹಿನ್ನೆಲೆ ಅವರ ಅಂತ್ಯಸಂಸ್ಕಾರದ ಕಾರ್ಯ ಮುಗಿಸಿಕೊಂಡು ಶಿವಲಿಂಗೇಶ್ವರ ಸ್ವಾಮೀಜಿ ತಮ್ಮ ಕಾರಿನಲ್ಲಿ ವಾಪಸ್ ಆಗುವಾಗ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ: ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ - ಚಂದ್ರಶೇಖರ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಶಿ ಮಠದ ಸ್ವಾಮೀಜಿಗಳು ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
![ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ: ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ Sri Shivalingeshwar Swamijis car accident at dharwad](https://etvbharatimages.akamaized.net/etvbharat/prod-images/768-512-15755189-thumbnail-3x2-nin.jpg)
Sri Shivalingeshwar Swamijis car accident at dharwad
ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಶಿ ಮಠದ ಸ್ವಾಮೀಜಿಗಳು ನಿಡಸೋಶಿಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಯವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗರಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Last Updated : Jul 6, 2022, 10:36 PM IST