ಕರ್ನಾಟಕ

karnataka

By

Published : Apr 28, 2020, 10:26 PM IST

ETV Bharat / state

ಧಾರವಾಡದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೊರೊನಾ ಸೋಂಕಿತರನ್ನು ಹೊರತುಪಡಿಸಿ ಉಳಿದ ಸಾಮಾನ್ಯ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್​​ಗಳನ್ನು ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಆರಂಭಿಸಲಾಗುತ್ತಿದೆ.

The District Collector visits the hospitals to start the Kovid Care Center
ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಭೇಟಿ

ಧಾರವಾಡ: ಕೊರೊನಾ ವೈರಾಣು ಸೋಂಕಿತರಲ್ಲದ ಸ್ವಲ್ಪಮಟ್ಟಿಗಿನ ಜ್ವರ ಹಾಗೂ ಇತರೆ ಅನಾರೋಗ್ಯ ತೊಂದರೆಗಳಿಂದ ಬಳಲುತ್ತಿರುವ ಜನರಿಗೆ ಆರೈಕೆ ನೀಡಲು ಕೋವಿಡ್ ಕೇರ್ ಸೆಂಟರ್​​ಗಳನ್ನು ಅವಳಿ ನಗರದಲ್ಲಿ ಆರಂಭಿಸಲಾಗುತ್ತಿದೆ.

ಜಿಲ್ಲಾಧಿಕಾರಿ ದೀಪಾ ಚೋಳನ್ ಹಿರಿಯ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಆಸ್ಪತ್ರೆಗಳು ಮತ್ತು ಖಾಸಗಿ ಕಟ್ಟಡಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಬಿ.ಸಿ.ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ABOUT THE AUTHOR

...view details