ಕರ್ನಾಟಕ

karnataka

ETV Bharat / state

ಕಳ್ಳರ ಕೈ ಚಳಕ... ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಖದೀಮರು ಪರಾರಿ - undefined

ಹುಬ್ಬಳ್ಳಿಯಲ್ಲಿ ಇಂದು ಬೆಳಗ್ಗೆ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿಶ್ವೇಶ್ವರಯ್ಯನಗರದ ಓಲ್ಡ್​ ಎಂಪ್ಲಾಯ್​ಮೆಂಟ್​​ ಕಚೇರಿ ಬಳಿ ವೃದ್ಧೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ವೃದ್ದೆಯ ಮಾಂಗಲ್ಯ ಸರ ಕಿತ್ತು ಪರಾರಿ

By

Published : Apr 21, 2019, 1:59 PM IST

ಹುಬ್ಬಳ್ಳಿ : ಅವಳಿ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಜೋರಾಗಿದೆ. ಇಂದು ಬೆಳಗ್ಗೆ ಕಳ್ಳರು ಕೈಚಳಕ ತೋರಿಸಿದ್ದಾರೆ. ವೃದ್ಧೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ವೃದ್ಧೆಯ ಮಾಂಗಲ್ಯ ಸರ ಎಗರಿಸಿದ ಖದೀಮರು

ವಿಶ್ವೇಶ್ವರಯ್ಯನಗರದ ಘಟನೆ ನಡೆದಿದೆ. ರಾಜಾಬಾಯಿ ಬುರಲಿ ಎಂಬುವರು ಮಾಂಗಲ್ಯ ಸರ ಕಳೆದುಕೊಂಡಿರುವ 65 ವರ್ಷದ ವರ್ಷದ ವೃದ್ದೆ. ಅವರ ಕೊರಳಿನಿಂದ 140 ಗ್ರಾಂ. ಚಿನ್ನದ ಸರ ಕೊರಳಿಂದ ಕಿತ್ತುಕೊಂಡು ಸರಗಳ್ಳರು ಪರಾರಿಯಾಗಿದ್ದಾರೆ.

ಪಲ್ಸರ್ ಬೈಕ್​ನಲ್ಲಿ ಬಂದ ಕಳ್ಳರಿಬ್ಬರು ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ. ಮಾಜಿ ಸಂಸದ ಐ ಜಿ ಸನದಿ ಮನೆ ಮುಂದೆ ಕಳ್ಳರು ಈ ಕೃತ್ಯವೆಸಗಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಶೋಕ್​ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details