ಹುಬ್ಬಳ್ಳಿ:ಕೆಲವರು ಮುಂದಿನ ಸಿಎಂ ಆಗುವ ಬಗ್ಗೆ ಮಾತನಾಡುವುದು ತಪ್ಪು. ಎಲೆಕ್ಷನ್ ಆಗಿ ಬಹುಮತ ಬಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗುತ್ತದೆ. ತಮ್ಮ ತಮ್ಮ ನಾಯಕರ ಬಗ್ಗೆ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಯೇ ವಿನಃ ಅದು ಬಣವಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷವಿಲ್ಲ ಎಂಬ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಗೊಂದಲ ಇದೆ. ಅದಕ್ಕೆ ಯತ್ನಾಳ್ ಮಾತನಾಡುತ್ತಾರೆ. ಅವರ ನಾಯಕರ ಭ್ರಷ್ಟಾಚಾರವನ್ನು ಹೇಳುತ್ತಿದ್ದಾರೆ. ರಾಜ್ಯದಲ್ಲಿ ವಿಪಕ್ಷ ಸಮರ್ಥವಾಗಿದೆ ಎಂದರು.