ಧಾರವಾಡ: ರೈತರು ಬೆಳೆದ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಜೊತೆಗೆ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತಸೇನೆ ನಡೆಸಿರುವ ಧರಣಿ ಮುಂದುವರೆದಿದೆ. ಬುಧವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ತಿಳಿಸಿದ್ದಾರೆ.
ನಾಳೆಯಿಂದ ರೈತರ ಸಾಂಕೇತಿಕ ಉಪವಾಸ ಸತ್ಯಾಗ್ರಹ: ವಿರೇಶ ಸೊಬರದಮಠ
ಬುಧವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ್ ಸೊಬರದಮಠ ತಿಳಿಸಿದ್ದಾರೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪವಾಸ ಸತ್ಯಾಗ್ರಹದಲ್ಲಿ ಏನಾದರೂ ಹೆಚ್ಚು ಕಡಿಮೆಯಾದ್ರೆ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಅವರು ಧರಣಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ್ದಾರೆ. ಆದರೆ ಇಲ್ಲಿಯ ತನಕ ಅವರು ರೈತರ ಬೇಡಿಕೆ ಈಡೇರಿಸುವ ಯಾವುದೇ ಭರವಸೆ ನೀಡಿಲ್ಲ ಎಂದು ದೂರಿದರು.
ಇನ್ನು, ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು, ಖರೀದಿ ಕೇಂದ್ರ ತೆರೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಸೊಬರದಮಠ ಒತ್ತಾಯಿಸಿದ್ದಾರೆ.