ಕರ್ನಾಟಕ

karnataka

ETV Bharat / state

ಗಡಿಯಲ್ಲಿ ಸಾಮರಸ್ಯ ಇರಬೇಕು ಎಂದರೆ ಸಾಹಿತಿಗಳೇ ಅಧಿಕಾರಕ್ಕೆ ಬರಬೇಕು: ಸಿ.ಸೋಮಶೇಖರ್​ - Karnataka Border Development Authority Chairman Dr. C. Somashekhar

ಧಾರವಾಡದಲ್ಲಿ ಡಾ. ದ.ರಾ. ಬೇಂದ್ರೆ 125ನೇ ಜನ್ಮದಿನಾಚರಣೆ ಹಾಗೂ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಬೇಂದ್ರೆ ಭವನದಲ್ಲಿ ಜರುಗಿತು.

dsd
ಗಡಿಯಲ್ಲಿ ಸಾಮರಸ್ಯ ಇರಬೇಕು ಎಂದರೆ ಸಾಹಿತಿಗಳೇ ಅಧಿಕಾರಕ್ಕೆ ಬರಬೇಕು:ಸಿ. ಸೋಮಶೇಖರ್​

By

Published : Jan 31, 2021, 8:34 PM IST

ಧಾರವಾಡ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದವಿಲ್ಲದೆ ಸಾಮರಸ್ಯ ಇರಬೇಕು ಎಂದರೆ ಎರಡೂ ಕಡೆ ಸಾಹಿತಿಗಳೇ ಅಧಿಕಾರಕ್ಕೆ ಬಂದುಬಿಡಬೇಕು ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್​ ಅಭಿಪ್ರಾಯಪಟ್ಟಿದ್ದಾರೆ.

ಗಡಿಯಲ್ಲಿ ಸಾಮರಸ್ಯ ಇರಬೇಕು ಎಂದರೆ ಸಾಹಿತಿಗಳೇ ಅಧಿಕಾರಕ್ಕೆ ಬರಬೇಕು: ಸಿ.ಸೋಮಶೇಖರ್​

ನಗರದ ಬೇಂದ್ರೆ ಭವನದಲ್ಲಿ ಆಯೋಜಿಸಿದ್ದ ಡಾ. ದ.ರಾ. ಬೇಂದ್ರೆ 125ನೇ ಜನ್ಮದಿನಾಚರಣೆ ಹಾಗೂ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾಷೆ, ಭೌಗೋಳಿಕತೆ ಹೆಸರಿನಲ್ಲಿ ತಗಾದೆಯಲ್ಲೇ ನಾವು ಇದ್ದೇವೆ. ಗಡಿ ವ್ಯಾಜ್ಯ ತೀರ್ಮಾನ ಮಾಡಲು ವಿಶೇಷ ಆಯೋಗವೇ ಇದೆ. ಬೇಂದ್ರೆಯವರ ಮನೆ ಭಾಷೆ, ಮನೆಯಂಗಳದ ಭಾಷೆ ಬೇರೆ ಬೇರೆಯಾಗಿತ್ತು.

ಭಾಷೆ ಬಗ್ಗೆ ಯಾಕಿಷ್ಟು ನಮ್ಮ ನಮ್ಮ ಮಧ್ಯೆ ಈ ಸಂಘರ್ಷ. ಭಾಷಾವಾರು ಪ್ರಾಂತ್ಯ ರಚನೆ ಆದ ಮೇಲೂ ನಾವು ಭಾಷೆಗಳ ಮೇಲೆ ಸಂಘರ್ಷ ಮಾಡುತ್ತಿದ್ದೇವೆ ಎಂದರು. ಸಮಾರಂಭದಲ್ಲಿ ಕವಿ, ನಾಟಕಕಾರ, ಅಂಕಣಕಾರ, ಅನುವಾದಕ ಪ್ರೊ. ಹೆಚ್.ಎಸ್.ಶಿವಪ್ರಕಾಶ್​ಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ABOUT THE AUTHOR

...view details