ಕರ್ನಾಟಕ

karnataka

ETV Bharat / state

ಪೆಟ್ರೋಲ್ ಬಂಕ್​ನಲ್ಲಿ ತಲ್ವಾರ್​​​ನಿಂದ ಲಾರಿ ಚಾಲಕನ ಮೇಲೆ ಹಲ್ಲೆ: ಆಸ್ಪತ್ರಗೆ ದಾಖಲು - ಹುಬ್ಬಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ

ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯ ಪೆಟ್ರೋಲ್​ ಬಂಕ್​​ನಲ್ಲಿ ಲಾರಿ ಚಾಲಕನ ಮೇಲೆ ಕಿಡಿಗೇಡಿಗಳು ತಲ್ವಾರ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

Unknown persons attacked lorry driver with talwar
ಹುಬ್ಬಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ತಲ್ವಾರ್​​​ನಿಂದ ಹಲ್ಲೆ

By

Published : Jan 3, 2022, 8:32 AM IST

ಹುಬ್ಬಳ್ಳಿ: ಪೆಟ್ರೋಲ್ ಬಂಕ್​​​ನಲ್ಲಿ ಲಾರಿ ಚಾಲಕನೊಬ್ಬನಿಗೆ ತಲ್ವಾರ್​​​ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.

ಹಲ್ಲೆಗೊಳಗಾದ ಲಾರಿ ಚಾಲಕ

ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪ ದುರ್ಘಟನೆ ಸಂಭವಿಸಿದ್ದು, ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದರ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ.

ಘಟನೆಯಲ್ಲಿ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್​​ಗೆ ದಾಖಲಿಸಲಾಗಿದ್ದು, ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details