ಕರ್ನಾಟಕ

karnataka

ETV Bharat / state

ರಾಜಸ್ಥಾನದಲ್ಲಿ ರೈತ ನಾಯಕ ಟಿಕಾಯತ್ ಮೇಲೆ ದಾಳಿ: ಕ್ರಮಕ್ಕೆ ರೈತ ಸಂಘಟನೆಗಳ ಆಗ್ರಹ - ಧಾರವಾಡದಲ್ಲಿ ವಿವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ

ಧಾರವಾಡದ ಜಿಲ್ಲಾಧಿಕಾರಿ ‌ಕಚೇರಿ ಎದುರು ವಿವಿಧ ರೈತ ಸಂಘಟನೆಗಳು ರೈತ ನಾಯಕ‌ ರಾಕೇಶ್​ ಟಿಕಾಯತ್ ಮೇಲೆ ದಾಳಿ ಮಾಡಿರುವ ಬಿಜೆಪಿ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದವು.

ವಿವಿಧ ರೈತ ಸಂಘಟನೆಗಳ ಪ್ರತಿಭಟನೆ
Various organizations activists protested in Dharwad

By

Published : Apr 3, 2021, 1:44 PM IST

ಧಾರವಾಡ:ರೈತ ನಾಯಕ‌ ರಾಕೇಶ್​ ಟಿಕಾಯತ್ ಮೇಲೆ ದಾಳಿ ಮಾಡಿರುವ ಬಿಜೆಪಿ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ‌ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು

ಜಿಲ್ಲಾಧಿಕಾರಿ ‌ಕಚೇರಿ ಎದುರು ಜಮಾಯಿಸಿದ ರೈತ ಸಂಘಟನೆಗಳ ಪ್ರಮುಖರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಡಿಸಿ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತ ಹೋರಾಟದ ನೇತೃತ್ವ ವಹಿಸಿರುವ ರಾಕೇಶ್​ ಟಿಕಾಯತ್ ಅವರು ರಾಜಸ್ತಾನ ಜಿಲ್ಲೆಯ ತರ್ತಾಪೂರ ಎಂಬಲ್ಲಿ ಬಿಜೆಪಿ ಗೂಂಡಾಗಳು ಟಿಕಾಯತ್ ವಾಹನದ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.

ಟಿಕಾಯತ್ ವಾಹನದ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆ ಕಾರು ಬಿಜೆಪಿಯ ಕುಲದೀಪ್​​ ಯಾದವ್​​ ಎಂಬುವವರಿಗೆ ಸೇರಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಘಟನೆಗೆ ಕಾರಣರಾದ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details