ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಇಂದು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ. ಈ ಹಿನ್ನೆಲೆ ಕೋರ್ಟ್ ಸುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ವಿನಯ್ ಕುಲಕರ್ಣಿಯನ್ನು ಕೋರ್ಟ್ಗೆ ಹಾಜರುಪಡಿಸಲಿರುವ ಸಿಬಿಐ: ನ್ಯಾಯಾಲಯದ ಸುತ್ತ ಬಿಗಿ ಭದ್ರತೆ - VInay Kulkarni will be taken to court today
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಇಂದು ಕೋರ್ಟ್ಗೆ ಹಾಜರು ಪಡಿಸಲಿರುವ ಹಿನ್ನೆಲೆ ನ್ಯಾಯಾಲಯದ ಸುತ್ತ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಳ್ಳುವ ಸಾಧ್ಯತೆಯಿರುವ ಕಾರಣ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
![ವಿನಯ್ ಕುಲಕರ್ಣಿಯನ್ನು ಕೋರ್ಟ್ಗೆ ಹಾಜರುಪಡಿಸಲಿರುವ ಸಿಬಿಐ: ನ್ಯಾಯಾಲಯದ ಸುತ್ತ ಬಿಗಿ ಭದ್ರತೆ ಇಂದು ವಿನಯ್ ಕುಲಕರ್ಣಿಯನ್ನು ಕೋರ್ಟ್ಗೆ ಹಾಜರು](https://etvbharatimages.akamaized.net/etvbharat/prod-images/768-512-9482734-59-9482734-1604896233054.jpg)
ನ್ಯಾಯಾಲಯದ ಸುತ್ತ ಬಿಗಿ ಭದ್ರತೆ
ನ್ಯಾಯಾಲಯದ ಸುತ್ತ ಬಿಗಿ ಭದ್ರತೆ
ಧಾರವಾಡದಲ್ಲಿರುವ ಜಿಲ್ಲಾ ನ್ಯಾಯಾಲಯದ ಸುತ್ತ 3 ಕೆಎಸ್ಆರ್ಪಿ, 5 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. 1 ಅಗ್ನಿಶಾಮಕ ದಳದ ವಾಹನ, ಇಬ್ಬರು ಡಿಸಿಪಿ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ಮೂವರು ಡಿವೈಎಸ್ಪಿ, 10 ಇನ್ಸ್ಪೆಕ್ಟರ್, 15 ಪಿಎಸ್ಐಗಳನ್ನು ನಿಯೋಜಿಸಲಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿಯನ್ನು ನ್ಯಾಯಾಲಯದ ಹೊರಭಾಗದಲ್ಲಿ ನಿಯೋಜಿಸಲಾಗಿದೆ.
ವಾಹನಗಳ ನಿಲುಗಡೆಗೆ ಅವಕಾಶ ನಿರಾಕರಿಸಲಾಗಿದೆ. ಪೊಲೀಸರಿಂದ ವಾಹನಗಳ ತೆರವು ಮಾಡಲಾಗುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಳ್ಳುವ ಸಾಧ್ಯತೆ ಇರುವ ಕಾರಣ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.
Last Updated : Nov 9, 2020, 10:19 AM IST